BREAKING NEWS

ಇಂದೋರ್ ದೇವಸ್ಥಾನದ ಮೆಟ್ಟಿಲುಬಾವಿ ದುರಂತ: 35ಕ್ಕೆ ಏರಿದ ಸಾವಿನ ಸಂಖ್ಯೆ

ಇಂದೋರ್ (ಮಧ್ಯ ಪ್ರದೇಶ): ನಗರದ ಬಲೇಶ್ವರ್ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ದುರಂತಕ್ಕೆ ಸಾವಿಗೀಡಾದವರ ಸಂಖ್ಯೆ ಶುಕ್ರವಾರ 35ಕ್ಕೆ ಏರಿದ್ದು, ಒಬ್ಬರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಗುರುವಾರ ರಾಮನವಮಿ ಆಚರಣೆ ವೇಳೆ ದೇವಸ್ಥಾನದಲ್ಲಿ ಜನ ದಟ್ಟಣೆ ಏರ್ಪಟ್ಟಿತ್ತು. ಅಲ್ಲಿರುವ ಬಾವಿಯಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರ ದಂಡು ಜಮಾಯಿಸಿತ್ತು. ಈ ವೇಳೆ ನಾಲ್ಕು ದಶಕಗಳಷ್ಟು ಹಳೆಯ ಮೆಟ್ಟಿಲು ಕುಸಿದಿದೆ. ಪರಿಣಾಮ ಅದರ ಮೇಲೆ ನಿಂತಿದ್ದ ಹಲವಾರು ಜನರು ಬಾವಿಗೆ ಬಿದ್ದಿದ್ದು, 11 ಜನರ ಮೃತದೇಹವನ್ನು ಅಗ್ನಿಶಾಮಕ ದಳದವರು ಹೊರತೆಗೆದಿದ್ದರು. ಉಳಿದವರ ಪತ್ತೆಗಾಗಿ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ) ಹಾಗೂ ಸೇನೆಯ ಸಹಾಯದಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

’ಅವಘಡದಲ್ಲಿ ಗಾಯಗೊಂಡ 16 ಮಂದಿಯನ್ನು ಆಸ್ಪತ್ರೆಗೆ ದಾಖಲುಪಡಿಸಲಾಗಿದೆ. ಹಾಗೂ ಇಬ್ಬರಿಗೆ ಪ್ರಥಮ ಚಿಕಿತ್ಸೆ ಕೊಡಲಾಗಿದೆ’ ಎಂದು ದುರಂತ ನಡೆದ ಸಂದರ್ಭ ಕಂದಾಯ ಆಯುಕ್ತರಾದ ಪವನ್ ಕುಮಾರ್ ಶರ್ಮಾ ಅವರು ಹೇಳಿದ್ದರು.

’ತುಂಬಾ ಇಕ್ಕಟ್ಟಾದ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿದ್ದು, ಇಲ್ಲಿನ ಬಾವಿಯ ನೀರು ಪಂಪು ಮಾಡಿ ಮೇಲೆತ್ತಲು ಬಳಸುವ ಕೊಳವೆ ದ್ವಾರ ಒಡೆದಿದ್ದರಿಂದ ದುರ್ಘಟನೆ ಸಂಭವಿಸಿದೆ’ ಎಂಬುದು ಅಧಿಕಾರಿಗಳ ಅಭಿಪ್ರಾಯ.

’ಕಳಪೆ ಗುಣಮಟ್ಟದ ಸಿಮೆಂಟು ಹಲಗೆ ಬಳಸಿ ಬಾವಿ ಮೇಲೆ ಮೆಟ್ಟಿಲನ್ನು ನಿರ್ಮಿಸಲಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

andolanait

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

42 mins ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

1 hour ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

1 hour ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

6 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

6 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

7 hours ago