BREAKING NEWS

ಇನ್ಫೊಸಿಸ್‌ ಲಾಭ ಶೇ 7.8 ಏರಿಕೆ

ಬೆಂಗಳೂರು : ಇನ್ಫೊಸಿಸ್ ಕಂಪನಿಯ ನಿವ್ವಳ ಲಾಭವು 2022–23ನೇ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 7.8ರಷ್ಟು ಹೆಚ್ಚಾಗಿ ₹6,128 ಕೋಟಿಗೆ ತಲುಪಿದೆ.

ಕಂಪನಿಯ ವರಮಾನವು ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 16ರಷ್ಟು ವೃದ್ಧಿಯಾಗಿದ್ದು ₹37,441 ಕೋಟಿಗೆ ಏರಿಕೆ ಆಗಿದೆ. 2022–23ನೇ ಹಣಕಾಸು ವರ್ಷಕ್ಕೆ ನಿವ್ವಳ ಲಾಭ ಶೇ 9ರಷ್ಟು ಹೆಚ್ಚಾಗಿ ₹24,095 ಕೋಟಿಗೆ ತಲುಪಿದೆ. ವರಮಾನವು ಶೇ 20.7ರಷ್ಟು ಏರಿಕೆ ಕಂಡು ₹1.46 ಲಕ್ಷ ಕೋಟಿಗೆ ಏರಿಕೆ ಆಗಿದೆ.ಜಾಗತಿಕ ಆರ್ಥಿಕ ಅನಿಶ್ಚಿತತೆಯ ಕಾರಣದಿಂದಾಗಿ 2023-24ನೇ ಹಣಕಾಸು ವರ್ಷಕ್ಕೆ ಕಂಪನಿಯ ವರಮಾನವು ಶೇ 4–7ರ ಮಟ್ಟದಲ್ಲಿ ಬೆಳವಣಿಗೆ ಕಾಣುವ ಅಂದಾಜನ್ನು ಕಂಪನಿ ಮಾಡಿದೆ.ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಹಣಕಾಸು ವ್ಯವಸ್ಥೆಯಲ್ಲಿನ ಕುಸಿತದಿಂದಾಗಿ ಇನ್ಫೊಸಿಸ್‌ನ ವರಮಾನವು ನಿರೀಕ್ಷೆಗಿಂತಲೂ ಕಡಿಮೆ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2023-24ನೇ ಹಣಕಾಸು ವರ್ಷಕ್ಕೆ ವರಮಾನ ಬೆಳವಣಿಗೆಯ ಕುರಿತು ಕಂಪನಿ ಮಾಡಿರುವ ಅಂದಾಜು ಸಹ ಮಾರುಕಟ್ಟೆ ವಿಶ್ಲೇಷಕರ ನಿರೀಕ್ಷೆಗಿಂತಲೂ ಕಡಿಮೆ ಎಂದು ರಾಯಿಟರ್ಸ್‌ ಹೇಳಿದೆ.2022-23ನೇ ಹಣಕಾಸು ವರ್ಷದ ಉತ್ತಮ ಫಲಿತಾಂಶವು ಡಿಜಿಟಿಲ್‌, ಕ್ಲೌಡ್‌ ಮತ್ತು ಆಟೊಮೇಷನ್‌ ಸಾಮರ್ಥ್ಯದ ಕಡೆಗೆ ಗಮನ ಮುಂದುವರಿಸಿರುವುದನ್ನು ಸೂಚಿಸುತ್ತಿದೆ ಎಂದು ಕಂಪನಿಯ ಸಿಇಒ ಸಲೀಲ್‌ ಪಾರೇಖ್‌ ಹೇಳಿದರು.ಕಂಪನಿ ಬಿಟ್ಟು ಹೋಗುತ್ತಿರುವವ ಪ್ರಮಾಣವು ಡಿಸೆಂಬರ್ ತ್ರೈಮಾಸಿಕದಲ್ಲಿ ಶೇ 24.3ರಷ್ಟು ಇದ್ದಿದ್ದು ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 20.9ಕ್ಕೆ ಇಳಿಕೆ ಆಗಿದೆ.

lokesh

Recent Posts

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

37 mins ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

46 mins ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

1 hour ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

2 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

2 hours ago

ಶಾಲಾ ಮಕ್ಕಳಿಗೆ ಕಳಪೆ ಊಟ ; ಮುಖ್ಯ ಶಿಕ್ಷಕಿ ಅಮಾನತ್ತು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…

2 hours ago