BREAKING NEWS

ಇನ್ಫೊಸಿಸ್‌ ಲಾಭ ಶೇ 7.8 ಏರಿಕೆ

ಬೆಂಗಳೂರು : ಇನ್ಫೊಸಿಸ್ ಕಂಪನಿಯ ನಿವ್ವಳ ಲಾಭವು 2022–23ನೇ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 7.8ರಷ್ಟು ಹೆಚ್ಚಾಗಿ ₹6,128 ಕೋಟಿಗೆ ತಲುಪಿದೆ.

ಕಂಪನಿಯ ವರಮಾನವು ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 16ರಷ್ಟು ವೃದ್ಧಿಯಾಗಿದ್ದು ₹37,441 ಕೋಟಿಗೆ ಏರಿಕೆ ಆಗಿದೆ. 2022–23ನೇ ಹಣಕಾಸು ವರ್ಷಕ್ಕೆ ನಿವ್ವಳ ಲಾಭ ಶೇ 9ರಷ್ಟು ಹೆಚ್ಚಾಗಿ ₹24,095 ಕೋಟಿಗೆ ತಲುಪಿದೆ. ವರಮಾನವು ಶೇ 20.7ರಷ್ಟು ಏರಿಕೆ ಕಂಡು ₹1.46 ಲಕ್ಷ ಕೋಟಿಗೆ ಏರಿಕೆ ಆಗಿದೆ.ಜಾಗತಿಕ ಆರ್ಥಿಕ ಅನಿಶ್ಚಿತತೆಯ ಕಾರಣದಿಂದಾಗಿ 2023-24ನೇ ಹಣಕಾಸು ವರ್ಷಕ್ಕೆ ಕಂಪನಿಯ ವರಮಾನವು ಶೇ 4–7ರ ಮಟ್ಟದಲ್ಲಿ ಬೆಳವಣಿಗೆ ಕಾಣುವ ಅಂದಾಜನ್ನು ಕಂಪನಿ ಮಾಡಿದೆ.ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಹಣಕಾಸು ವ್ಯವಸ್ಥೆಯಲ್ಲಿನ ಕುಸಿತದಿಂದಾಗಿ ಇನ್ಫೊಸಿಸ್‌ನ ವರಮಾನವು ನಿರೀಕ್ಷೆಗಿಂತಲೂ ಕಡಿಮೆ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2023-24ನೇ ಹಣಕಾಸು ವರ್ಷಕ್ಕೆ ವರಮಾನ ಬೆಳವಣಿಗೆಯ ಕುರಿತು ಕಂಪನಿ ಮಾಡಿರುವ ಅಂದಾಜು ಸಹ ಮಾರುಕಟ್ಟೆ ವಿಶ್ಲೇಷಕರ ನಿರೀಕ್ಷೆಗಿಂತಲೂ ಕಡಿಮೆ ಎಂದು ರಾಯಿಟರ್ಸ್‌ ಹೇಳಿದೆ.2022-23ನೇ ಹಣಕಾಸು ವರ್ಷದ ಉತ್ತಮ ಫಲಿತಾಂಶವು ಡಿಜಿಟಿಲ್‌, ಕ್ಲೌಡ್‌ ಮತ್ತು ಆಟೊಮೇಷನ್‌ ಸಾಮರ್ಥ್ಯದ ಕಡೆಗೆ ಗಮನ ಮುಂದುವರಿಸಿರುವುದನ್ನು ಸೂಚಿಸುತ್ತಿದೆ ಎಂದು ಕಂಪನಿಯ ಸಿಇಒ ಸಲೀಲ್‌ ಪಾರೇಖ್‌ ಹೇಳಿದರು.ಕಂಪನಿ ಬಿಟ್ಟು ಹೋಗುತ್ತಿರುವವ ಪ್ರಮಾಣವು ಡಿಸೆಂಬರ್ ತ್ರೈಮಾಸಿಕದಲ್ಲಿ ಶೇ 24.3ರಷ್ಟು ಇದ್ದಿದ್ದು ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 20.9ಕ್ಕೆ ಇಳಿಕೆ ಆಗಿದೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago