BREAKING NEWS

ಇನ್ಫೊಸಿಸ್‌ ಲಾಭ ಶೇ 7.8 ಏರಿಕೆ

ಬೆಂಗಳೂರು : ಇನ್ಫೊಸಿಸ್ ಕಂಪನಿಯ ನಿವ್ವಳ ಲಾಭವು 2022–23ನೇ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 7.8ರಷ್ಟು ಹೆಚ್ಚಾಗಿ ₹6,128 ಕೋಟಿಗೆ ತಲುಪಿದೆ.

ಕಂಪನಿಯ ವರಮಾನವು ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 16ರಷ್ಟು ವೃದ್ಧಿಯಾಗಿದ್ದು ₹37,441 ಕೋಟಿಗೆ ಏರಿಕೆ ಆಗಿದೆ. 2022–23ನೇ ಹಣಕಾಸು ವರ್ಷಕ್ಕೆ ನಿವ್ವಳ ಲಾಭ ಶೇ 9ರಷ್ಟು ಹೆಚ್ಚಾಗಿ ₹24,095 ಕೋಟಿಗೆ ತಲುಪಿದೆ. ವರಮಾನವು ಶೇ 20.7ರಷ್ಟು ಏರಿಕೆ ಕಂಡು ₹1.46 ಲಕ್ಷ ಕೋಟಿಗೆ ಏರಿಕೆ ಆಗಿದೆ.ಜಾಗತಿಕ ಆರ್ಥಿಕ ಅನಿಶ್ಚಿತತೆಯ ಕಾರಣದಿಂದಾಗಿ 2023-24ನೇ ಹಣಕಾಸು ವರ್ಷಕ್ಕೆ ಕಂಪನಿಯ ವರಮಾನವು ಶೇ 4–7ರ ಮಟ್ಟದಲ್ಲಿ ಬೆಳವಣಿಗೆ ಕಾಣುವ ಅಂದಾಜನ್ನು ಕಂಪನಿ ಮಾಡಿದೆ.ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಹಣಕಾಸು ವ್ಯವಸ್ಥೆಯಲ್ಲಿನ ಕುಸಿತದಿಂದಾಗಿ ಇನ್ಫೊಸಿಸ್‌ನ ವರಮಾನವು ನಿರೀಕ್ಷೆಗಿಂತಲೂ ಕಡಿಮೆ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2023-24ನೇ ಹಣಕಾಸು ವರ್ಷಕ್ಕೆ ವರಮಾನ ಬೆಳವಣಿಗೆಯ ಕುರಿತು ಕಂಪನಿ ಮಾಡಿರುವ ಅಂದಾಜು ಸಹ ಮಾರುಕಟ್ಟೆ ವಿಶ್ಲೇಷಕರ ನಿರೀಕ್ಷೆಗಿಂತಲೂ ಕಡಿಮೆ ಎಂದು ರಾಯಿಟರ್ಸ್‌ ಹೇಳಿದೆ.2022-23ನೇ ಹಣಕಾಸು ವರ್ಷದ ಉತ್ತಮ ಫಲಿತಾಂಶವು ಡಿಜಿಟಿಲ್‌, ಕ್ಲೌಡ್‌ ಮತ್ತು ಆಟೊಮೇಷನ್‌ ಸಾಮರ್ಥ್ಯದ ಕಡೆಗೆ ಗಮನ ಮುಂದುವರಿಸಿರುವುದನ್ನು ಸೂಚಿಸುತ್ತಿದೆ ಎಂದು ಕಂಪನಿಯ ಸಿಇಒ ಸಲೀಲ್‌ ಪಾರೇಖ್‌ ಹೇಳಿದರು.ಕಂಪನಿ ಬಿಟ್ಟು ಹೋಗುತ್ತಿರುವವ ಪ್ರಮಾಣವು ಡಿಸೆಂಬರ್ ತ್ರೈಮಾಸಿಕದಲ್ಲಿ ಶೇ 24.3ರಷ್ಟು ಇದ್ದಿದ್ದು ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 20.9ಕ್ಕೆ ಇಳಿಕೆ ಆಗಿದೆ.

lokesh

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

12 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

13 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

13 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

13 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

13 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

13 hours ago