ಬೆಂಗಳೂರು : ಇನ್ಫೊಸಿಸ್ ಕಂಪನಿಯ ನಿವ್ವಳ ಲಾಭವು 2022–23ನೇ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಶೇ 7.8ರಷ್ಟು ಹೆಚ್ಚಾಗಿ ₹6,128 ಕೋಟಿಗೆ ತಲುಪಿದೆ.
ಕಂಪನಿಯ ವರಮಾನವು ಮಾರ್ಚ್ ತ್ರೈಮಾಸಿಕದಲ್ಲಿ ಶೇ 16ರಷ್ಟು ವೃದ್ಧಿಯಾಗಿದ್ದು ₹37,441 ಕೋಟಿಗೆ ಏರಿಕೆ ಆಗಿದೆ. 2022–23ನೇ ಹಣಕಾಸು ವರ್ಷಕ್ಕೆ ನಿವ್ವಳ ಲಾಭ ಶೇ 9ರಷ್ಟು ಹೆಚ್ಚಾಗಿ ₹24,095 ಕೋಟಿಗೆ ತಲುಪಿದೆ. ವರಮಾನವು ಶೇ 20.7ರಷ್ಟು ಏರಿಕೆ ಕಂಡು ₹1.46 ಲಕ್ಷ ಕೋಟಿಗೆ ಏರಿಕೆ ಆಗಿದೆ.ಜಾಗತಿಕ ಆರ್ಥಿಕ ಅನಿಶ್ಚಿತತೆಯ ಕಾರಣದಿಂದಾಗಿ 2023-24ನೇ ಹಣಕಾಸು ವರ್ಷಕ್ಕೆ ಕಂಪನಿಯ ವರಮಾನವು ಶೇ 4–7ರ ಮಟ್ಟದಲ್ಲಿ ಬೆಳವಣಿಗೆ ಕಾಣುವ ಅಂದಾಜನ್ನು ಕಂಪನಿ ಮಾಡಿದೆ.ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಹಣಕಾಸು ವ್ಯವಸ್ಥೆಯಲ್ಲಿನ ಕುಸಿತದಿಂದಾಗಿ ಇನ್ಫೊಸಿಸ್ನ ವರಮಾನವು ನಿರೀಕ್ಷೆಗಿಂತಲೂ ಕಡಿಮೆ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
2023-24ನೇ ಹಣಕಾಸು ವರ್ಷಕ್ಕೆ ವರಮಾನ ಬೆಳವಣಿಗೆಯ ಕುರಿತು ಕಂಪನಿ ಮಾಡಿರುವ ಅಂದಾಜು ಸಹ ಮಾರುಕಟ್ಟೆ ವಿಶ್ಲೇಷಕರ ನಿರೀಕ್ಷೆಗಿಂತಲೂ ಕಡಿಮೆ ಎಂದು ರಾಯಿಟರ್ಸ್ ಹೇಳಿದೆ.2022-23ನೇ ಹಣಕಾಸು ವರ್ಷದ ಉತ್ತಮ ಫಲಿತಾಂಶವು ಡಿಜಿಟಿಲ್, ಕ್ಲೌಡ್ ಮತ್ತು ಆಟೊಮೇಷನ್ ಸಾಮರ್ಥ್ಯದ ಕಡೆಗೆ ಗಮನ ಮುಂದುವರಿಸಿರುವುದನ್ನು ಸೂಚಿಸುತ್ತಿದೆ ಎಂದು ಕಂಪನಿಯ ಸಿಇಒ ಸಲೀಲ್ ಪಾರೇಖ್ ಹೇಳಿದರು.ಕಂಪನಿ ಬಿಟ್ಟು ಹೋಗುತ್ತಿರುವವ ಪ್ರಮಾಣವು ಡಿಸೆಂಬರ್ ತ್ರೈಮಾಸಿಕದಲ್ಲಿ ಶೇ 24.3ರಷ್ಟು ಇದ್ದಿದ್ದು ಮಾರ್ಚ್ ತ್ರೈಮಾಸಿಕದಲ್ಲಿ ಶೇ 20.9ಕ್ಕೆ ಇಳಿಕೆ ಆಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…