BREAKING NEWS

ಸಿದ್ದರಾಮಯ್ಯ ಆಪ್ ಬದಲು ವಾಟ್ಸಪ್ ಚಾನಲ್ ಮೊರೆ ಹೋದ ಸಿಎಂ ಸಿದ್ದು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಆಪ್ ಬದಲು ವಾಟ್ಸಪ್ ಚಾನಲ್ ಮೊರೆ ಹೋಗಿದ್ದಾರೆ. ತಮ್ಮ ಅಭಿಪ್ರಾಯ, ಭಾಷಣ, ಸಂದೇಶಗಳನ್ನು ದಿನನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಮೂಲಕ ನೇರ ಜನಸಂಪರ್ಕದಲ್ಲಿದ್ದಾರೆ.

ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಈ ಬಾರಿ ತಮ್ಮ ಅಧಿಕೃತ ವಾಟ್ಸಪ್ ಚಾನಲ್ ಆರಂಭಿಸಿದ್ದಾರೆ.

ಸೆ. 12, 2023ರಂದು ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ವಾಟ್ಸಪ್ ಚಾನಲ್ ಆರಂಭಿಸಿದ್ದಾರೆ.

3,08,000 ಫಾಲೋವರ್ಸ್ ಇದ್ದಾರೆ. ಅದರ ಜೊತೆಗೆ ಅಕ್ಟೋಬರ್ 10ರಂದು ಸಿದ್ದರಾಮಯ್ಯ ಹೆಸರಿನ ವೈಯಕ್ತಿಕ ವಾಟ್ಸಪ್ ಚಾನಲ್ ಕೂಡ ಆರಂಭಿಸಿದ್ದಾರೆ. ವೈಯಕ್ತಿಕ ವಾಟ್ಸಪ್ ಚಾನಲ್‍ಗೆ 22 ಸಾವಿರ ಫಾಲೋವರ್ಸ್ ಇದ್ದಾರೆ.

ಈ ವಾಟ್ಸಪ್ ಚಾನಲ್‍ನಲ್ಲಿ ನಿರಂತರವಾಗಿ ಜನ ಸಂಪರ್ಕ ಹೊಂದಿದ್ದಾರೆ. ಈ ಚಾನಲ್‍ನಲ್ಲಿ ಸಿಎಂ ದೈನಂದಿನ ಚಟುವಟಿಕೆ, ತೆಗೆದುಕೊಂಡ ಮಹತ್ವದ ನಿರ್ಧಾರಗಳು, ಸಭೆಗಳ ಪ್ರಮುಖ ಅಂಶಗಳು, ಹೊಸ ಯೋಜನೆ ಮಾಹಿತಿ, ಆರೋಪ ಅಥವಾ ಪ್ರಚಲಿತ ಘಟನೆಗಳಿಗೆ ಪ್ರತಿಕ್ರಿಯೆಗಳು ಸೇರಿದಂತೆ ಸಾಕಷ್ಟು ಮಾಹಿತಿಯನ್ನು ನೇರವಾಗಿ ಹಂಚುತ್ತಿದ್ದಾರೆ.

ಇನ್ನು ಚಾನಲ್‍ಗಳಲ್ಲಿ ಬಂದ ಸಂದೇಶಗಳಿಗೆ ತಮ್ಮ ಪ್ರತಿಕ್ರಿಯೆಯನ್ನು ಸಾರ್ವಜನಿಕರು ಇಮೋಜಿ ಬಳಸಿ ನೀಡುವ ಅವಕಾಶ ಇದೆ. ಜನರಿಗೆ ಬೆರಳ ತುದಿಯಲ್ಲಿ ಸರ್ಕಾರದ ದೈನಂದಿನ ಆಗುಹೋಗುಗಳ ಮಾಹಿತಿ ಒದಗಿಸಿ, ಆಡಳಿತವನ್ನು ಮತ್ತಷ್ಟು ಪಾರದರ್ಶಕವಾಗಿಸಲು ಈ ವಾಟ್ಸಪ್ ಚಾನಲ್ ಆರಂಭಿಸಲಾಗಿದೆ ಎಂಬುದು ಸಿಎಂ ಮಾಧ್ಯಮ ತಂಡದ ಸಿಬ್ಬಂದಿಯ ಅಭಿಮತವಾಗಿದೆ.

ಇತ್ತ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್ ಹಾಗೂ ಘಿ ನಲ್ಲೂ ಸಕ್ರಿಯವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಯ ಅಧಿಕೃತ ಫೇಸ್ಬುಕ್ ಹಾಗೂ ಎಕ್ಸ್ ಖಾತೆ ಮೂಲಕ ಸಿಎಂ ಸಿದ್ದರಾಮಯ್ಯ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ಎಂಬ ಅಧಿಕೃತ ಫೇಸ್ ಬುಕ್ ಖಾತೆಗೆ ಸುಮಾರು 10 ಲಕ್ಷ ಫಾಲೋವರ್ಸ್ ಇದ್ದಾರೆ.

ಇನ್ನು ಸಿದ್ದರಾಮಯ್ಯರ ವೈಯಕ್ತಿಕ ಫೇಸ್ ಬುಕ್ ಖಾತೆಯಲ್ಲಿ 4.47 ಲಕ್ಷ ಫಾಲೋವರ್ಸ್ ಇದ್ದಾರೆ. ಅದೇ ರೀತಿ ಸಿಎಂ ಆಫ್ ಕರ್ನಾಟಕ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸುಮಾರು 10.50 ಲಕ್ಷ ಫಾಲೋವರ್ಸ್ ಇದ್ದಾರೆ. ಇನ್ನು ತಮ್ಮ ವೈಯಕ್ತಿಕ ಎಕ್ಸ್ ಖಾತೆಗೆ ಸುಮಾರು 9.82 ಸಾವಿರ ಫಾಲೋವರ್ಸ್ ಇದ್ದಾರೆ. ಈ ಎರಡೂ ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಗಳಲ್ಲಿ ಸಿಎಂ ಸಿದ್ದರಾಮಯ್ಯ ನಿರಂತರ ಜನಸಂಪರ್ಕ ಹೊಂದಿದ್ದು, ಸಕ್ರಿಯರಾಗಿದ್ದಾರೆ.

ಹಿಂದಿನ ಅವಧಿಯಲ್ಲಿ ತಮ್ಮದೇ ಸಿಎಂ ಸಿದ್ದರಾಮಯ್ಯ ಆಪ್ ಅನ್ನು ಆರಂಭಿಸಿದ್ದರು. ಆದರೆ ಚಾಲನೆ ನೀಡಿದ ಆರು ತಿಂಗಳಲ್ಲೇ ಆ ಆಪ್ ಕಣ್ಮರೆಯಾಯಿತು. ತಮ್ಮ ಪ್ರಸಕ್ತ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳ ಹೊಸತನಗಳನ್ನು ಅಳವಡಿಸಿಕೊಂಡು ಜನಸಂಪರ್ಕದಲ್ಲಿರಲು ಯತ್ನಿಸುತ್ತಿದ್ದಾರೆ. ಈ ಬಾರಿ ಆಪ್ ಬದಲಿಗೆ ವಾಟ್ಸಪ್ ಚಾನೆಲ್ ಮೊರೆ ಹೋಗಿದ್ದರು.

ಈ ಮುಂಚೆ 2013-2018 ರವರೆಗೆ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಅವರು ಸಿಎಂ ಸಿದ್ದರಾಮಯ್ಯ ಆಪ್ ಅನ್ನು ಆರಂಭಿಸಿದ್ದರು. ಅಕ್ಟೋಬರ್ 2017ರಲ್ಲಿ ಸಿಎಂ ಸಿದ್ದರಾಮಯ್ಯ ಆಪ್ ಗೆ ಚಾಲನೆ ನೀಡಿದ್ದರು. ಆ ಮೂಲಕ ಜನರ ಜೊತೆ ನೇರ ಸಂಪರ್ಕಕ್ಕೆ ನಿರ್ಧರಿಸಿದ್ದರು. ಈ ಆಪ್ ಮೂಲಕ ಜನರ ಅಹವಾಲು, ದೂರು, ಸಲಹೆ ನೀಡಬಹುದಾಗಿತ್ತು. ಜೊತೆಗೆ ಸರ್ಕಾರದ ಸಾಧನೆ, ನೀತಿಗಳು, ಕಾರ್ಯಕ್ರಮ, ಅನುಷ್ಠಾನ ಸೇರಿದಂತೆ ಮುಖ್ಯಮಂತ್ರಿಗಳ ಭಾಷಣ, ಸಂದರ್ಶನ, ಪ್ರವಾಸ ಕಾರ್ಯಕ್ರಮಗಳ ಮಾಹಿತಿ ಎಲ್ಲವೂ ನಿಮ್ಮ ಬೆರಳ ತುದಿಯಲ್ಲಿಯೇ ಲಭ್ಯವಾಗುತ್ತಿತ್ತು.

ಏನಿದು ಸಿಎಂ ಸಿದ್ದರಾಮಯ್ಯ ಆಪ್?
ಹಿಂದಿನ ತಮ್ಮ ಅಧಿಕಾರಾವಧಿಯ ಕೊನೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ ಆರಂಭಿಸಿದ್ದರು. ಅಕ್ಟೋಬರ್ 2017ರಲ್ಲಿ ಆಪ್‍ಗೆ ಚಾಲನೆ ನೀಡಿದ್ದರು. ಪಿಎಂ ಮೋದಿ ಆಪ್ ರೀತಿಯಲ್ಲೇ ಸಿಎಂ ಸಿದ್ದರಾಮಯ್ಯ ಆಗೆ ಚಾಲನೆ ನೀಡಲಾಗಿತ್ತು. ಅಂದಿನ ತಮ್ಮ ಸರ್ಕಾರದ ಸಾಧನೆ, ಜನಪ್ರಿಯ ಕಾರ್ಯಕ್ರಮಗಳು, ನೀತಿ, ಯೋಜನೆಗಳು, ಅನುಷ್ಠಾನಗಳ ಬಗ್ಗೆ ಮಾಹಿತಿ ನೀಡಲಾಗುತ್ತಿತ್ತು. ಇನ್ನು ತಮ್ಮ ಭಾಷಣ, ಸಂದರ್ಶನ, ಸಂದೇಶ, ಅಭಿಪ್ರಾಯಗಳನ್ನು ಜನರ ಜೊತೆ ನೇರವಾಗಿ ಹಂಚುತ್ತಿದ್ದರು. ಈ ಆ?ಯಪ್ ಅನ್ನು ಸರ್ಕಾರದ ಇ-ಆಡಳಿತ ಇಲಾಖೆ ನಿರ್ವಹಿಸುತ್ತಿತ್ತು.

ಸಿಎಂ ಸಿದ್ಧರಾಮಯ್ಯ ಆಪ್ ಲಾಂಚ್ ಆದ ನಾಲ್ಕೈದು ತಿಂಗಳಲ್ಲೇ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಆಪ್ ಅನ್ನು ಡೌನ್‍ಲೋಡ್ ಮಾಡಿದ್ದರು. ಆಪ್ ಮೂಲಕ ಸುಮಾರು 4 ಸಾವಿರಕ್ಕೂ ಅಧಿಕ ಸಲಹೆಗಳು ಬಂದಿದ್ದವು ಎಂದು ಅಂದು ಇದ್ದ ಅವರ ಮಾಧ್ಯಮ ತಂಡದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಅಲ್ಪಾವಧಿಯಲ್ಲೇ ಸಿಎಂ ಸಿದ್ದರಾಮಯ್ಯ ಆಪ್ ಗೆ ಉತ್ತಮ ಸ್ಪಂದನೆ ಸಿಕ್ಕಿತ್ತು. ಆಪ್ ಅನ್ನು ಸಿಎಂ ಸಿದ್ದರಾಮಯ್ಯ ಸಕ್ರಿಯವಾಗಿ ಬಳಸುತ್ತಿದ್ದರು. ಆ ಮೂಲಕ ಜನರ ಜೊತೆ ನೇರ ಸಂಪರ್ಕ ಸಾಧಿಸುತ್ತಿದ್ದರು.ಆಪ್ ಆರಂಭವಾದ ಆರು ತಿಂಗಳಲ್ಲೇ ಸ್ಥಗಿತ: ಆದರೆ ಆಪ್ ಆರಂಭಿಸಿದ ಆರು ತಿಂಗಳೊಳಗೆ ಸಿಎಂ ಸಿದ್ದರಾಮಯ್ಯ ಆಪ್ ಗೂಗಲ್ ಪ್ಲೇ ಸ್ಟೋರ್‍ನಿಂದ ಕಣ್ಮರೆಯಾಗಿತ್ತು.

2018 ಮಾರ್ಚ್ ತಿಂಗಳಲ್ಲಿ ಆಪ್ ಅನ್ನು ಸ್ಥಗಿತಗೊಳಿಸಲಾಗಿತ್ತು. ಆ ವೇಳೆ ದತ್ತಾಂಶ ಕಳವು ಆರೋಪ ದೊಡ್ಡ ಸದ್ದು ಮಾಡಿತ್ತು. ಆರೋಪ ಕೇಳಿ ಬಂದ ಹಿನ್ನೆಲೆ ಕೇಂದ್ರದಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಆಪ್ ಅನ್ನು ಡಿಲೀಟ್ ಮಾಡಿತ್ತು. ಮಾರ್ಚ್ 26, 2018ಕ್ಕೆ ಆಪ್ ಅನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ತೆರವು ಮಾಡಿತ್ತು.

ಇದಾದ ಮರುದಿನವೇ ಸಿಎಂ ಸಿದ್ದರಾಮಯ್ಯ ಆಪ್ ಕೂಡ ಕಣ್ಮರೆಯಾಗಿತ್ತು. ಅಲ್ಲಿಗೆ ಸಿಎಂ ಸಿದ್ದರಾಮಯ್ಯ ಆಪ್ ಕಾರ್ಯ ಸ್ಥಗಿತಗೊಳಿಸಲಾಗಿತ್ತು. ದತ್ತಾಂಶ ಕಳವು ಆರೋಪ ಕೇಳಿ ಬಂದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಆ?ಯಪ್ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಬಲವಾಗಿ ಕೇಳಿ ಬಂದಿದ್ದವು.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago