ಚೆನ್ನೈ: ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಉಲ್ಲೇಖಿಸಬೇಕಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ನೀಡಿರುವ ಸೂಚನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಖಂಡಿಸಿದ್ದಾರೆ. ಇದಕ್ಕೆ ಕಾರಣರಾದವರನ್ನು ದಕ್ಷಿಣದಿಂದ ಹೊರಗಟ್ಟಬೇಕು ಎಂದು ಅವರು ಗುಡುಗಿದ್ದಾರೆ.
‘ದಹಿ’ ಬಳಕೆಗೆ ಸಂಬಂಧಿಸಿದಂತೆ ಎಫ್ಎಸ್ಎಸ್ಎಐನಿಂದ ಕೆಎಂಎಫ್ಗೆ ಬಂದಿರುವ ಸೂಚನೆ ಬಗ್ಗೆ ಹಲವು ಸುದ್ದಿ ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ವರದಿಯನ್ನು ಸ್ಟಾಲಿನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ಅಂಕೆ ಇಲ್ಲದ ಹಿಂದಿ ಹೇರಿಕೆಯು ಮೊಸರಿನ ಪ್ಯಾಕೆಟ್ಗಳ ವರೆಗೆ ಬಂದಿದೆ. ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡಕ್ಕೆ ಹಿನ್ನಡೆಯುಂಟು ಮಾಡುತ್ತಿದೆ. ಇದಕ್ಕೆ ಜವಾಬ್ದಾರರಾದವರನ್ನು ದಕ್ಷಿಣದಿಂದ ಶಾಶ್ವತವಾಗಿ ಹೊರಹಾಕಬೇಕು’ ಎಂದು ಅವರು ಟ್ವಿಟರ್ನಲ್ಲಿ ಬರೆದಿದ್ದಾರೆ.
ಹಾಲಿನ ಉತ್ಪನ್ನಗಳ ಪೊಟ್ಟಣಗಳ ಮೇಲೆ ಹಿಂದಿಯಲ್ಲಿ ಉಲ್ಲೇಖವಿರಬೇಕು. ನಂತರ ಸ್ಥಳೀಯ ಭಾಷೆಯಲ್ಲಿ ಉಲ್ಲೇಖಿಸಬೇಕೆಂದು ಎಫ್ಎಸ್ಎಸ್ಎಐ ಇತ್ತೀಚೆಗೆ ಕೆಎಂಎಫ್ಗೆ ಸೂಚನೆ ನೀಡಿತ್ತು. ಇದು ಕನ್ನಡ ಹೋರಾಟಗಾರರ ಆಕ್ರೋಶಕ್ಕೂ ಕಾರಣವಾಗಿತ್ತು.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…