ಚೆನ್ನೈ: ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಉಲ್ಲೇಖಿಸಬೇಕಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ನೀಡಿರುವ ಸೂಚನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಖಂಡಿಸಿದ್ದಾರೆ. ಇದಕ್ಕೆ ಕಾರಣರಾದವರನ್ನು ದಕ್ಷಿಣದಿಂದ ಹೊರಗಟ್ಟಬೇಕು ಎಂದು ಅವರು ಗುಡುಗಿದ್ದಾರೆ.
‘ದಹಿ’ ಬಳಕೆಗೆ ಸಂಬಂಧಿಸಿದಂತೆ ಎಫ್ಎಸ್ಎಸ್ಎಐನಿಂದ ಕೆಎಂಎಫ್ಗೆ ಬಂದಿರುವ ಸೂಚನೆ ಬಗ್ಗೆ ಹಲವು ಸುದ್ದಿ ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ವರದಿಯನ್ನು ಸ್ಟಾಲಿನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ಅಂಕೆ ಇಲ್ಲದ ಹಿಂದಿ ಹೇರಿಕೆಯು ಮೊಸರಿನ ಪ್ಯಾಕೆಟ್ಗಳ ವರೆಗೆ ಬಂದಿದೆ. ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡಕ್ಕೆ ಹಿನ್ನಡೆಯುಂಟು ಮಾಡುತ್ತಿದೆ. ಇದಕ್ಕೆ ಜವಾಬ್ದಾರರಾದವರನ್ನು ದಕ್ಷಿಣದಿಂದ ಶಾಶ್ವತವಾಗಿ ಹೊರಹಾಕಬೇಕು’ ಎಂದು ಅವರು ಟ್ವಿಟರ್ನಲ್ಲಿ ಬರೆದಿದ್ದಾರೆ.
ಹಾಲಿನ ಉತ್ಪನ್ನಗಳ ಪೊಟ್ಟಣಗಳ ಮೇಲೆ ಹಿಂದಿಯಲ್ಲಿ ಉಲ್ಲೇಖವಿರಬೇಕು. ನಂತರ ಸ್ಥಳೀಯ ಭಾಷೆಯಲ್ಲಿ ಉಲ್ಲೇಖಿಸಬೇಕೆಂದು ಎಫ್ಎಸ್ಎಸ್ಎಐ ಇತ್ತೀಚೆಗೆ ಕೆಎಂಎಫ್ಗೆ ಸೂಚನೆ ನೀಡಿತ್ತು. ಇದು ಕನ್ನಡ ಹೋರಾಟಗಾರರ ಆಕ್ರೋಶಕ್ಕೂ ಕಾರಣವಾಗಿತ್ತು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…