ಬೆಂಗಳೂರು: ಪ್ರಧಾನಿ ವಿರುದ್ಧದ ನಿಂದನೆ ಅವಹೇಳನಕಾರಿ ಅಥವಾ ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು ದೇಶದ್ರೋಹ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್, ಬೀದರ್ ನ್ಯೂ ಪೊಲೀಸರು ಶಾಲಾ ಆಡಳಿತ ಮಂಡಳಿ ವಿರುದ್ಧ ದಾಖಲಿಸಿದ ಪ್ರಕರಣವನ್ನು ರದ್ದುಗೊಳಿಸಿದ್ದಾರೆ.
ಬೀದರ್ ನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್ ಅಬ್ದುಲ್ ಖಾಲಿಕ್, ಮೊಹಮದ್ ಬಿಲಾಲ್ ಇನಾಂದರ್ ಮೊಹಮದ್ ಮೆಹತಾಬ್ ವಿರುದ್ಧ ಪೊಲೀಸರು ದೇಶದ್ರೋಹ ಆರೋಪ ಹೊರಿಸಿ ಎಫ್ ಐಆರ್ ದಾಖಲಿಸಿದ್ದರು.
ಪ್ರಕರಣದಲ್ಲಿ ಸೆಕ್ಷನ್ 153 (ಎ) ಮತ್ತು ಇಂಡಿಯನ್ ಪಿನಾಲ್ ಕೋಡ್ (ಐಪಿಎಸ್) ಆರೋಪಗಳು ಈ ಪ್ರಕರಣದಲ್ಲಿ ಕಂಡು ಬರುತ್ತಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.
ಪ್ರಧಾನಿಯನ್ನು ಚಪ್ಪಲಿಯಿಂದ ಹೊಡೆಯಬೇಕು ಎಂದು ಹೇಳಿರುವುದು ಬೇಜಾಬ್ದಾರಿ ಮತ್ತು ಅವಹೇಳನಕಾರಿಯಾಗಿದೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ಹಾಗೂ ಸರಕಾರದಲ್ಲಿರು ವ್ಯಕ್ತಿಯನ್ನು ಟೀಕಿಸುವುದು ಸಹಜ. ಆದರೆ ಇದಕ್ಕಾಗಿ ಮುಸ್ಲಿಮರು ದೇಶಬಿಟ್ಟು ಹೋಗಿ ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿಯನ್ನು ನಿಂದಿಸಿದ ನಾಟಕ ಕೂಡ ಶಾಲೆಯ ಆವರಣದಲ್ಲಿ ನಡೆದಿದೆ ಹೊರತು ಮಕ್ಕಳು ಹೇಳುವ ಘೋಷಣೆಗಳು ಯಾವುದೇ ಪ್ರಚೋದನಕಾರಿಯಲ್ಲ. ಇದರಿಂದ ಕೋಮುಗಲಭೆ ಸಂಭವಿಸುತ್ತದೆ ಎಂದು ಬಿಂಬಿಸುವುದು ಕ್ರೌರ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…