BREAKING NEWS

ಪ್ರಧಾನಿ ವಿರುದ್ಧದ ನಿಂದನೆ ದೇಶದ್ರೋಹವಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪ್ರಧಾನಿ ವಿರುದ್ಧದ ನಿಂದನೆ ಅವಹೇಳನಕಾರಿ ಅಥವಾ ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು ದೇಶದ್ರೋಹ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್, ಬೀದರ್ ನ್ಯೂ ಪೊಲೀಸರು ಶಾಲಾ ಆಡಳಿತ ಮಂಡಳಿ ವಿರುದ್ಧ ದಾಖಲಿಸಿದ ಪ್ರಕರಣವನ್ನು ರದ್ದುಗೊಳಿಸಿದ್ದಾರೆ.

ಬೀದರ್ ನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್ ಅಬ್ದುಲ್ ಖಾಲಿಕ್, ಮೊಹಮದ್ ಬಿಲಾಲ್ ಇನಾಂದರ್ ಮೊಹಮದ್ ಮೆಹತಾಬ್ ವಿರುದ್ಧ ಪೊಲೀಸರು ದೇಶದ್ರೋಹ ಆರೋಪ ಹೊರಿಸಿ ಎಫ್ ಐಆರ್ ದಾಖಲಿಸಿದ್ದರು.

ಪ್ರಕರಣದಲ್ಲಿ ಸೆಕ್ಷನ್ 153 (ಎ) ಮತ್ತು ಇಂಡಿಯನ್ ಪಿನಾಲ್ ಕೋಡ್ (ಐಪಿಎಸ್) ಆರೋಪಗಳು ಈ ಪ್ರಕರಣದಲ್ಲಿ ಕಂಡು ಬರುತ್ತಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.

ಪ್ರಧಾನಿಯನ್ನು ಚಪ್ಪಲಿಯಿಂದ ಹೊಡೆಯಬೇಕು ಎಂದು ಹೇಳಿರುವುದು ಬೇಜಾಬ್ದಾರಿ ಮತ್ತು ಅವಹೇಳನಕಾರಿಯಾಗಿದೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ಹಾಗೂ ಸರಕಾರದಲ್ಲಿರು ವ್ಯಕ್ತಿಯನ್ನು ಟೀಕಿಸುವುದು ಸಹಜ. ಆದರೆ ಇದಕ್ಕಾಗಿ ಮುಸ್ಲಿಮರು ದೇಶಬಿಟ್ಟು ಹೋಗಿ ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿಯನ್ನು ನಿಂದಿಸಿದ ನಾಟಕ ಕೂಡ ಶಾಲೆಯ ಆವರಣದಲ್ಲಿ ನಡೆದಿದೆ ಹೊರತು ಮಕ್ಕಳು ಹೇಳುವ ಘೋಷಣೆಗಳು ಯಾವುದೇ ಪ್ರಚೋದನಕಾರಿಯಲ್ಲ. ಇದರಿಂದ ಕೋಮುಗಲಭೆ ಸಂಭವಿಸುತ್ತದೆ ಎಂದು ಬಿಂಬಿಸುವುದು ಕ್ರೌರ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago