ಬೆಂಗಳೂರು: ಪ್ರಧಾನಿ ವಿರುದ್ಧದ ನಿಂದನೆ ಅವಹೇಳನಕಾರಿ ಅಥವಾ ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು ದೇಶದ್ರೋಹ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್, ಬೀದರ್ ನ್ಯೂ ಪೊಲೀಸರು ಶಾಲಾ ಆಡಳಿತ ಮಂಡಳಿ ವಿರುದ್ಧ ದಾಖಲಿಸಿದ ಪ್ರಕರಣವನ್ನು ರದ್ದುಗೊಳಿಸಿದ್ದಾರೆ.
ಬೀದರ್ ನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್ ಅಬ್ದುಲ್ ಖಾಲಿಕ್, ಮೊಹಮದ್ ಬಿಲಾಲ್ ಇನಾಂದರ್ ಮೊಹಮದ್ ಮೆಹತಾಬ್ ವಿರುದ್ಧ ಪೊಲೀಸರು ದೇಶದ್ರೋಹ ಆರೋಪ ಹೊರಿಸಿ ಎಫ್ ಐಆರ್ ದಾಖಲಿಸಿದ್ದರು.
ಪ್ರಕರಣದಲ್ಲಿ ಸೆಕ್ಷನ್ 153 (ಎ) ಮತ್ತು ಇಂಡಿಯನ್ ಪಿನಾಲ್ ಕೋಡ್ (ಐಪಿಎಸ್) ಆರೋಪಗಳು ಈ ಪ್ರಕರಣದಲ್ಲಿ ಕಂಡು ಬರುತ್ತಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.
ಪ್ರಧಾನಿಯನ್ನು ಚಪ್ಪಲಿಯಿಂದ ಹೊಡೆಯಬೇಕು ಎಂದು ಹೇಳಿರುವುದು ಬೇಜಾಬ್ದಾರಿ ಮತ್ತು ಅವಹೇಳನಕಾರಿಯಾಗಿದೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ಹಾಗೂ ಸರಕಾರದಲ್ಲಿರು ವ್ಯಕ್ತಿಯನ್ನು ಟೀಕಿಸುವುದು ಸಹಜ. ಆದರೆ ಇದಕ್ಕಾಗಿ ಮುಸ್ಲಿಮರು ದೇಶಬಿಟ್ಟು ಹೋಗಿ ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿಯನ್ನು ನಿಂದಿಸಿದ ನಾಟಕ ಕೂಡ ಶಾಲೆಯ ಆವರಣದಲ್ಲಿ ನಡೆದಿದೆ ಹೊರತು ಮಕ್ಕಳು ಹೇಳುವ ಘೋಷಣೆಗಳು ಯಾವುದೇ ಪ್ರಚೋದನಕಾರಿಯಲ್ಲ. ಇದರಿಂದ ಕೋಮುಗಲಭೆ ಸಂಭವಿಸುತ್ತದೆ ಎಂದು ಬಿಂಬಿಸುವುದು ಕ್ರೌರ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…