ನಂಜನಗೂಡು: ಕಳೆದ ವಾರ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರದ ವೇಳೆ ಕಿಡಿಗೇಡಿಗಳು ಶ್ರೀಕಂಠೇಶ್ವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿ ಅಪಚಾರ ಮಾಡಿದ ಹಿನ್ನಲೆ ಶ್ರೀಕಂಠೇಶ್ವರ ಭಕ್ತ ಮಂಡಳಿ ವತಿಯಿಂದ ನಾಳೆ ನಂಜನಗೂಡು ಬಂದ್ ಕರೆಯಲಾಗಿದೆ.
ಇದನ್ನು ಖಂಡಿಸಿ ಆಚರಣೆಯಲ್ಲಿ ಭಾಗಿಯಾಗಿದ್ದ ನೂರಾರು ಭಕ್ತರು ಸ್ಥಳದಲ್ಲೇ ಕೂತು ಆಹೋರಾತ್ರಿ ಧರಣಿ ನಡೆಸಿದರು. ಘಟನೆ ನಡೆದು ಒಂದು ವಾರವಾದೂ ಇನ್ನೂ ಆರೋಪಿಗಳನ್ನು ಬಂಧಿಸದಿರುವುದನ್ನು ಖಂಡಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ನಾಳೆ ನಂಜನಗೂಡು ಬಂದ್ಗೆ ಕರೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಭಕ್ತ ಮಂಡಳಿಯ ಸದಸ್ಯ ಗಿರೀಶ್, ಡಿ.26ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಇನ್ನಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಲು ಮುಂದಾಗಿಲ್ಲ ಎಂದು ಆರೋಪಿಸಿದರು.
ಘಟನೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಾಖ್ಷಿ ಆಧಾರಗಳು, ವೀಡೀಯೋ ತುಣುಕಗಳನ್ನು ನೀಡಲಾಗಿದೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಶ್ರೀಕಂಠೇಶ್ವರ ಸ್ವಾಮಿಯ ಸಾವಿರಾರು ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ.
ಈ ಕೂಡಲೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ನಾಳೆ ನಂಜನಗೂಡು ಬಂದ್ಗೆ ಕರೆ ನೀಡಲಾಗಿದೆ. ಯಾವುದೇ ಪಕ್ಷ ಭೇದವಿಲ್ಲದೇ ನಂನಗೂಡಿನ ವರ್ತಕರ ಸಂಘ, ಆಟೋರಿಕ್ಷಾ ಚಾಲಕರ ಸಂಘ, ಕನ್ನಡ ಪರ ಸಂಘಟನೆ, ರಸ್ತೆ ಬದಿ ವ್ಯಾಪಾರಿ ಸಂಘ ಸೇರಿದಂತೆ ಅನೇಕ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಬಂದ್ಗೆ ಬೆಂಬಲ ನೀಡಿದ್ದಾರೆ ಎಂದು ಗಿರೀಶ್ ತಿಳಿಸಿದರು.
ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೆ ಆರೋಪಿಗಳನ್ನು ಬಂಧಿಸಲು ಆದೇಶ ನೀಡಿ, ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇಲ್ಲವಾದರೇ ಈ ಹೋರಾಟ ಕೇವಲ ನಂಜನಗೂಡಿಗೇ ಸೀಮಿತಗೊಳಿಸದೇ ಜಿಲ್ಲಾಮಟ್ಟದಲ್ಲೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎನ್.ಆರ್. ಕೃಷ್ಣಪ್ಪಗೌಡ, ನಗರಸಭಾ ಸದಸ್ಯ ಕಪಿಲೇಶ್ ಇದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…