BREAKING NEWS

ಶ್ರೀಕಂಠೇಶ್ವರ ಸ್ವಾಮಿಗೆ ಅಪವಿತ್ರ ನೀರು ಎರಚಿ ಅಪಮಾನ: ನಾಳೆ ನಂಜನಗೂಡು ಬಂದ್‌!

ನಂಜನಗೂಡು: ಕಳೆದ ವಾರ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರದ ವೇಳೆ ಕಿಡಿಗೇಡಿಗಳು ಶ್ರೀಕಂಠೇಶ್ವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿ ಅಪಚಾರ ಮಾಡಿದ ಹಿನ್ನಲೆ  ಶ್ರೀಕಂಠೇಶ್ವರ ಭಕ್ತ  ಮಂಡಳಿ ವತಿಯಿಂದ ನಾಳೆ ನಂಜನಗೂಡು ಬಂದ್‌ ಕರೆಯಲಾಗಿದೆ. ನೂರಾರು ವರ್ಷಗಳಿಂದ ಆಚರಿಸಿಕೊಂಡು ಬಂದ ಧಾರ್ಮಿಕ ಆಚರಣೆಯಾದ ಅಂಧಕಾಸುರನ ಸಂಹಾರದ ವೇಳೆ ಬುದ್ಧಿಜೀವಿಗಳು ದೇವಾಲಯದ ಆಚರಣೆಗೆ ಅಡಚಣೆ ಮಾಡುವುದಲ್ಲದೇ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚುವ ಮೂಲಕ ಅಪಮಾನ ಮಾಡಿದ್ದರು.

ಇದನ್ನು ಖಂಡಿಸಿ ಆಚರಣೆಯಲ್ಲಿ ಭಾಗಿಯಾಗಿದ್ದ ನೂರಾರು ಭಕ್ತರು ಸ್ಥಳದಲ್ಲೇ ಕೂತು ಆಹೋರಾತ್ರಿ ಧರಣಿ ನಡೆಸಿದರು. ಘಟನೆ ನಡೆದು ಒಂದು ವಾರವಾದೂ ಇನ್ನೂ ಆರೋಪಿಗಳನ್ನು ಬಂಧಿಸದಿರುವುದನ್ನು ಖಂಡಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ನಾಳೆ ನಂಜನಗೂಡು ಬಂದ್‌ಗೆ ಕರೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಭಕ್ತ ಮಂಡಳಿಯ ಸದಸ್ಯ ಗಿರೀಶ್‌, ಡಿ.26ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಇನ್ನಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಲು ಮುಂದಾಗಿಲ್ಲ ಎಂದು ಆರೋಪಿಸಿದರು.

ಘಟನೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಾಖ್ಷಿ ಆಧಾರಗಳು, ವೀಡೀಯೋ ತುಣುಕಗಳನ್ನು ನೀಡಲಾಗಿದೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಶ್ರೀಕಂಠೇಶ್ವರ ಸ್ವಾಮಿಯ ಸಾವಿರಾರು ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ.

ಈ ಕೂಡಲೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ನಾಳೆ ನಂಜನಗೂಡು ಬಂದ್‌ಗೆ ಕರೆ ನೀಡಲಾಗಿದೆ. ಯಾವುದೇ ಪಕ್ಷ ಭೇದವಿಲ್ಲದೇ ನಂನಗೂಡಿನ ವರ್ತಕರ ಸಂಘ, ಆಟೋರಿಕ್ಷಾ ಚಾಲಕರ ಸಂಘ, ಕನ್ನಡ ಪರ ಸಂಘಟನೆ, ರಸ್ತೆ ಬದಿ ವ್ಯಾಪಾರಿ ಸಂಘ ಸೇರಿದಂತೆ ಅನೇಕ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡಿದ್ದಾರೆ ಎಂದು ಗಿರೀಶ್‌ ತಿಳಿಸಿದರು.

ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೆ ಆರೋಪಿಗಳನ್ನು ಬಂಧಿಸಲು ಆದೇಶ ನೀಡಿ, ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇಲ್ಲವಾದರೇ ಈ ಹೋರಾಟ ಕೇವಲ ನಂಜನಗೂಡಿಗೇ ಸೀಮಿತಗೊಳಿಸದೇ ಜಿಲ್ಲಾಮಟ್ಟದಲ್ಲೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎನ್‌.ಆರ್‌. ಕೃಷ್ಣಪ್ಪಗೌಡ, ನಗರಸಭಾ ಸದಸ್ಯ ಕಪಿಲೇಶ್‌ ಇದ್ದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago