BREAKING NEWS

ಶ್ರೀಕಂಠೇಶ್ವರ ಸ್ವಾಮಿಗೆ ಅಪವಿತ್ರ ನೀರು ಎರಚಿ ಅಪಮಾನ: ನಾಳೆ ನಂಜನಗೂಡು ಬಂದ್‌!

ನಂಜನಗೂಡು: ಕಳೆದ ವಾರ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರದ ವೇಳೆ ಕಿಡಿಗೇಡಿಗಳು ಶ್ರೀಕಂಠೇಶ್ವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿ ಅಪಚಾರ ಮಾಡಿದ ಹಿನ್ನಲೆ  ಶ್ರೀಕಂಠೇಶ್ವರ ಭಕ್ತ  ಮಂಡಳಿ ವತಿಯಿಂದ ನಾಳೆ ನಂಜನಗೂಡು ಬಂದ್‌ ಕರೆಯಲಾಗಿದೆ. ನೂರಾರು ವರ್ಷಗಳಿಂದ ಆಚರಿಸಿಕೊಂಡು ಬಂದ ಧಾರ್ಮಿಕ ಆಚರಣೆಯಾದ ಅಂಧಕಾಸುರನ ಸಂಹಾರದ ವೇಳೆ ಬುದ್ಧಿಜೀವಿಗಳು ದೇವಾಲಯದ ಆಚರಣೆಗೆ ಅಡಚಣೆ ಮಾಡುವುದಲ್ಲದೇ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚುವ ಮೂಲಕ ಅಪಮಾನ ಮಾಡಿದ್ದರು.

ಇದನ್ನು ಖಂಡಿಸಿ ಆಚರಣೆಯಲ್ಲಿ ಭಾಗಿಯಾಗಿದ್ದ ನೂರಾರು ಭಕ್ತರು ಸ್ಥಳದಲ್ಲೇ ಕೂತು ಆಹೋರಾತ್ರಿ ಧರಣಿ ನಡೆಸಿದರು. ಘಟನೆ ನಡೆದು ಒಂದು ವಾರವಾದೂ ಇನ್ನೂ ಆರೋಪಿಗಳನ್ನು ಬಂಧಿಸದಿರುವುದನ್ನು ಖಂಡಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ನಾಳೆ ನಂಜನಗೂಡು ಬಂದ್‌ಗೆ ಕರೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಭಕ್ತ ಮಂಡಳಿಯ ಸದಸ್ಯ ಗಿರೀಶ್‌, ಡಿ.26ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಇನ್ನಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಲು ಮುಂದಾಗಿಲ್ಲ ಎಂದು ಆರೋಪಿಸಿದರು.

ಘಟನೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಾಖ್ಷಿ ಆಧಾರಗಳು, ವೀಡೀಯೋ ತುಣುಕಗಳನ್ನು ನೀಡಲಾಗಿದೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಶ್ರೀಕಂಠೇಶ್ವರ ಸ್ವಾಮಿಯ ಸಾವಿರಾರು ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ.

ಈ ಕೂಡಲೇ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ನಾಳೆ ನಂಜನಗೂಡು ಬಂದ್‌ಗೆ ಕರೆ ನೀಡಲಾಗಿದೆ. ಯಾವುದೇ ಪಕ್ಷ ಭೇದವಿಲ್ಲದೇ ನಂನಗೂಡಿನ ವರ್ತಕರ ಸಂಘ, ಆಟೋರಿಕ್ಷಾ ಚಾಲಕರ ಸಂಘ, ಕನ್ನಡ ಪರ ಸಂಘಟನೆ, ರಸ್ತೆ ಬದಿ ವ್ಯಾಪಾರಿ ಸಂಘ ಸೇರಿದಂತೆ ಅನೇಕ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡಿದ್ದಾರೆ ಎಂದು ಗಿರೀಶ್‌ ತಿಳಿಸಿದರು.

ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೆ ಆರೋಪಿಗಳನ್ನು ಬಂಧಿಸಲು ಆದೇಶ ನೀಡಿ, ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇಲ್ಲವಾದರೇ ಈ ಹೋರಾಟ ಕೇವಲ ನಂಜನಗೂಡಿಗೇ ಸೀಮಿತಗೊಳಿಸದೇ ಜಿಲ್ಲಾಮಟ್ಟದಲ್ಲೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎನ್‌.ಆರ್‌. ಕೃಷ್ಣಪ್ಪಗೌಡ, ನಗರಸಭಾ ಸದಸ್ಯ ಕಪಿಲೇಶ್‌ ಇದ್ದರು.

andolanait

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

3 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

3 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

5 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

5 hours ago