BREAKING NEWS

ದೇವರಿಗೆ ಅಪವಿತ್ರ ನೀರು ಎರಚಿ ಅಪಮಾನ : ನಂಜನಗೂಡು ದೇವಾಲಯದ ಮುಂದೆ ಪ್ರತಿಭಟನೆ ನಡೆಸುತ್ತಿರುವ ನೂರಾರು ಭಕ್ತರು

ನಂಜನಗೂಡು: ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ ಬದ್ಧ ಅಂಧಕಾಸುರನ ಸಂಹಾರದ ವೇಳೆ ಕೆಲವು ಕಿಡಿಗೇಡಿಗಳು ದೇವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ದೇವಾಲಯದ ಮುಂದೆ ನೂರಾರು ಸಂಖ್ಯೆಯಲ್ಲಿ  ಭಕ್ತರು   ಜಮಾಯಿಸಿ ಧರಣಿ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ ನಂಜನಗೂಡಿನಲ್ಲಿ ನಡೆದ ಅಂಧಕಾಸುರನ ಸಂಹಾರದ ವೇಳೆ ಕೆಲವು ಬುದ್ಧಿ ಜೀವಿ ಹೆಸರಿನ ಕಿಡಿಗೇಡಿಗಳು ಶ್ರೀಕಂಠೇಶ್ವರನ ಉತ್ಸವ ಮೂರ್ತಿಗೆ ಅಪವಿತ್ರ ನೀರನ್ನು ಎರಚುವ ಮೂಲಕ ಅಪಮಾನ ಮಾಡಿದ್ದನ್ನು ವಿರೋಧಿಸಿ ಭಕ್ತರು ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಆರೋಪಿಗಳನ್ನು ಬಂಧಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದಲ್ಲಿ ಪೊಲೀಸರಿಗೆ ದೂರನ್ನು ಸಲ್ಲಿಸಲಾಗಿತ್ತು.

ಆದರೆ ಘಟನೆ ನಡೆದು ೨ದಿನ ಕಳೆದರು ಇನ್ನು ಕಿಡಿಗೇಡಿಗಳನ್ನು ಬಂಧಿಸಿರುವುದನ್ನು ವಿರೋಧಿಸಿ ಇಂದು ನಂಜನಗೂಡು ಶ್ರೀಕಂಠೇಶ್ವರನ ದೇವಾಲಯದ ಮುಂದೆ ನೂರಾರು ಸಂಖ್ಯೆಯಲ್ಲಿ ಸೇರಿರುವ ಭಕ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

 

ಈ ಕೂಡಲೆ ಕಿಡಿಗೇಡಿಗಳನ್ನು ಬಂಧಿಸಿ, ಅಲ್ಲದ್ದೆ  ಪ್ರತಿಭಟನಾ ಸ್ಥಳಕ್ಕೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಬರುವಂತೆ ಒತ್ತಾಯ ಮಾಡಿದ್ದಾರೆ.

ಪ್ರತಿಭಟನೆಗೆ ಅರ್ಚಕರ ಬೆಂಬಲ: ದೇವರಿಗೆ ಅಪವಿತ್ರ ನೀರು ಎರಚಿ ಅಪಮಾನ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಭಕ್ತಮಂಡಳಿಗೆ ಶ್ರೀಕಂಠೇಶ್ವರ ದೇವಾಲಯದ ನೌಕರರು ಬೆಂಬಲ ಸೂಚಿಸಿದ್ದಾರೆ. ಇಂದು ದೇವಾಲಯದ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ದೇವಾಲಯದ ಆಗಮಿಕರಾದ ನಾಗಚಂದ್ರ ದೀಕ್ಷಿತ್‌, ಪಾರುಪತ್ತೆಗಾರರರಾದ ಶಂಕರ ದೀಕ್ಷಿತ್‌, ನೀಲಕಂಠ ದೀಕ್ಷಿತ್‌ ಸೇರಿದಂತೆ ದೇವಾಲಯದ ಅರ್ಚಕರು ಬೆಂಬಲ ನೀಡಿದ್ದಾರೆ.

ದೇವಾಲಯದ ಯಾವುದೇ ಆಚರಣೆಯಾಗಲಿ, ದೇವಾಲಯದ ಕೈಪಿಡಿಯ ಪ್ರಕಾರವೇ ನಡೆಯುತ್ತದೆ. ಹಾಗೇ ನಡೆದುಕೊಂಡು ಬಂದಿದೆ. ಅಂಧಾಕಾಸುರನ ಸಂಹಾರಕ್ಕೆ ತೆರಳುವ ಸಂದರ್ಭದಲ್ಲಿ ಕಿಡಿಗೇಡಿಗಳು ಉತ್ಸವ ಮೂರ್ತಿ ಹಾಗೂ ಶ್ರೀಪಾದ ಸೇವಾ ನಿರತರಾಗಿದ್ದವರ ಮೇಲೆ ಅಪವಿತ್ರ ನೀರು ಎರಚಿ ಅಪಮಾನ ಮಾಡಿದ್ದಾರೆ. ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿಯ ಅವಘಡ ಸಂಭವಿಸಿದೆ. ಇಂದು ನಂಜನಗೂಡು ದೇವಾಲಯದಲ್ಲಿ ನಡೆದೆದ ಘಟನೆ ನಾಳೆ ಬೇರೆ ದೇವಾಲಯಗಳಲ್ಲಿ ನಡೆದರೆ ಆಶ್ಚರ್ಯವೇನು ಇಲ್ಲ. ಹೂಗಾಗಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
– ನಾಗಚಂದ್ರ ದೀಕ್ಷಿತ್‌, ಪ್ರಧಾನ ಅರ್ಚಕರು, ಶ್ರೀ ಶ್ರೀಕಂಠೇಶ್ವರ ದೇವಾಲಯ, ನಂಜನಗೂಡು

andolanait

Recent Posts

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

28 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

1 hour ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

2 hours ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

2 hours ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

3 hours ago