BREAKING NEWS

ದೇವರಿಗೆ ಅಪವಿತ್ರ ನೀರು ಎರಚಿ ಅಪಮಾನ : ನಂಜನಗೂಡು ದೇವಾಲಯದ ಮುಂದೆ ಪ್ರತಿಭಟನೆ ನಡೆಸುತ್ತಿರುವ ನೂರಾರು ಭಕ್ತರು

ನಂಜನಗೂಡು: ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ ಬದ್ಧ ಅಂಧಕಾಸುರನ ಸಂಹಾರದ ವೇಳೆ ಕೆಲವು ಕಿಡಿಗೇಡಿಗಳು ದೇವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ದೇವಾಲಯದ ಮುಂದೆ ನೂರಾರು ಸಂಖ್ಯೆಯಲ್ಲಿ  ಭಕ್ತರು   ಜಮಾಯಿಸಿ ಧರಣಿ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ ನಂಜನಗೂಡಿನಲ್ಲಿ ನಡೆದ ಅಂಧಕಾಸುರನ ಸಂಹಾರದ ವೇಳೆ ಕೆಲವು ಬುದ್ಧಿ ಜೀವಿ ಹೆಸರಿನ ಕಿಡಿಗೇಡಿಗಳು ಶ್ರೀಕಂಠೇಶ್ವರನ ಉತ್ಸವ ಮೂರ್ತಿಗೆ ಅಪವಿತ್ರ ನೀರನ್ನು ಎರಚುವ ಮೂಲಕ ಅಪಮಾನ ಮಾಡಿದ್ದನ್ನು ವಿರೋಧಿಸಿ ಭಕ್ತರು ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಆರೋಪಿಗಳನ್ನು ಬಂಧಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದಲ್ಲಿ ಪೊಲೀಸರಿಗೆ ದೂರನ್ನು ಸಲ್ಲಿಸಲಾಗಿತ್ತು.

ಆದರೆ ಘಟನೆ ನಡೆದು ೨ದಿನ ಕಳೆದರು ಇನ್ನು ಕಿಡಿಗೇಡಿಗಳನ್ನು ಬಂಧಿಸಿರುವುದನ್ನು ವಿರೋಧಿಸಿ ಇಂದು ನಂಜನಗೂಡು ಶ್ರೀಕಂಠೇಶ್ವರನ ದೇವಾಲಯದ ಮುಂದೆ ನೂರಾರು ಸಂಖ್ಯೆಯಲ್ಲಿ ಸೇರಿರುವ ಭಕ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

 

ಈ ಕೂಡಲೆ ಕಿಡಿಗೇಡಿಗಳನ್ನು ಬಂಧಿಸಿ, ಅಲ್ಲದ್ದೆ  ಪ್ರತಿಭಟನಾ ಸ್ಥಳಕ್ಕೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಬರುವಂತೆ ಒತ್ತಾಯ ಮಾಡಿದ್ದಾರೆ.

ಪ್ರತಿಭಟನೆಗೆ ಅರ್ಚಕರ ಬೆಂಬಲ: ದೇವರಿಗೆ ಅಪವಿತ್ರ ನೀರು ಎರಚಿ ಅಪಮಾನ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಭಕ್ತಮಂಡಳಿಗೆ ಶ್ರೀಕಂಠೇಶ್ವರ ದೇವಾಲಯದ ನೌಕರರು ಬೆಂಬಲ ಸೂಚಿಸಿದ್ದಾರೆ. ಇಂದು ದೇವಾಲಯದ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ದೇವಾಲಯದ ಆಗಮಿಕರಾದ ನಾಗಚಂದ್ರ ದೀಕ್ಷಿತ್‌, ಪಾರುಪತ್ತೆಗಾರರರಾದ ಶಂಕರ ದೀಕ್ಷಿತ್‌, ನೀಲಕಂಠ ದೀಕ್ಷಿತ್‌ ಸೇರಿದಂತೆ ದೇವಾಲಯದ ಅರ್ಚಕರು ಬೆಂಬಲ ನೀಡಿದ್ದಾರೆ.

ದೇವಾಲಯದ ಯಾವುದೇ ಆಚರಣೆಯಾಗಲಿ, ದೇವಾಲಯದ ಕೈಪಿಡಿಯ ಪ್ರಕಾರವೇ ನಡೆಯುತ್ತದೆ. ಹಾಗೇ ನಡೆದುಕೊಂಡು ಬಂದಿದೆ. ಅಂಧಾಕಾಸುರನ ಸಂಹಾರಕ್ಕೆ ತೆರಳುವ ಸಂದರ್ಭದಲ್ಲಿ ಕಿಡಿಗೇಡಿಗಳು ಉತ್ಸವ ಮೂರ್ತಿ ಹಾಗೂ ಶ್ರೀಪಾದ ಸೇವಾ ನಿರತರಾಗಿದ್ದವರ ಮೇಲೆ ಅಪವಿತ್ರ ನೀರು ಎರಚಿ ಅಪಮಾನ ಮಾಡಿದ್ದಾರೆ. ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿಯ ಅವಘಡ ಸಂಭವಿಸಿದೆ. ಇಂದು ನಂಜನಗೂಡು ದೇವಾಲಯದಲ್ಲಿ ನಡೆದೆದ ಘಟನೆ ನಾಳೆ ಬೇರೆ ದೇವಾಲಯಗಳಲ್ಲಿ ನಡೆದರೆ ಆಶ್ಚರ್ಯವೇನು ಇಲ್ಲ. ಹೂಗಾಗಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
– ನಾಗಚಂದ್ರ ದೀಕ್ಷಿತ್‌, ಪ್ರಧಾನ ಅರ್ಚಕರು, ಶ್ರೀ ಶ್ರೀಕಂಠೇಶ್ವರ ದೇವಾಲಯ, ನಂಜನಗೂಡು

andolanait

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

49 mins ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

56 mins ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

58 mins ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

60 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

1 hour ago