BREAKING NEWS

ತೀವ್ರಗೊಂಡ ‘ಇಂಡಿಯಾ’-ಭಾರತ್ ಚರ್ಚೆ

ನವದೆಹಲಿ: ಯುಪಿಎ ಒಕ್ಕೂಟವನ್ನು ‘ಇಂಡಿಯಾ’ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್) ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ, ಇಂಡಿಯಾ ಮತ್ತು ಭಾರತ್ ಪರಿಕಲ್ಪನೆಗಳ ನಡುವೆ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿ ಹೊಂದಿದ ರಾಷ್ಟ್ರ ಮತ್ತು ಜನತೆ ಹಾಗೂ ಪ್ರದೇಶಗಳ ಆಕಾಂಕ್ಷೆಯನ್ನು ಒಳಗೊಂಡ ನವಭಾರತ ಎಂದು ವಿಶ್ಲೇಷಿಸಿದ್ದಾರೆ. ಏತನ್ಮಧ್ಯೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಮ್ಮ ಟ್ವಿಟ್ಟರ್ ವಿವರಗಳಿಂದ ಇಂಡಿಯಾ ಎಂಬ ಪದವನ್ನು ಕಿತ್ತು ಹಾಕಿ ಭಾರತ್ ಎಂದು ಹಾಕಿಕೊಂಡಿದ್ದಾರೆ.

ಇಂಡಿಯಾ ಎಂದರೆ ಭಾರತ ಅಲ್ಲ ಎಂದು ಪ್ರತಿಪಾದಿಸಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದ್ದಾರೆ.

“ಯುಪಿಎ ಇಂಡಿಯಾ ಆದ ತಕ್ಷಣ ಬಿಜೆಪಿ ಎಂದರೆ ಭಾರತ ಎಂದಾಗಿದೆ. ನಮ್ಮ ನಾಗರೀಕತೆಯ ಸಂಘರ್ಷ ಭಾರತ ಹಾಗೂ ಇಂಡಿಯಾ ನಡುವೆ ಆಗಿದೆ. ಬ್ರಿಟಿಷರು ನಮ್ಮ ದೇಶವನ್ನು ಇಂಡಿಯಾ ಎಂದು ಹೆಸರಿಸಿದರು. ಈ ಸಾಮ್ರಾಜ್ಯಶಾಹಿ ಸಿದ್ಧಾಂತಗಳಿಂದ ನಾವು ಮುಕ್ತರಾಗಲು ಪ್ರಯತ್ನಿಸಬೇಕಾಗಿದೆ. ನಮ್ಮ ಪೂರ್ವಜರು ಭಾರತಕ್ಕಾಗಿ ಹೋರಾಡಿದರು ಮತ್ತು ನಾವು ಭಾರತಕ್ಕಾಗಿ ಕೆಲಸ ಮಾಡುತ್ತೇವೆ. ಬಿಜೆಪಿ ಭಾರತಕ್ಕಾಗಿ” ಎಂದು ಹಿಮಾಂತ ಟ್ವೀಟ್ ಮಾಡಿದ್ದಾರೆ.

ಇಂಡಿಯಾ ಮತ್ತು ಭಾರತ ನಡುವಿನ ವಿಶ್ಲೇಷಣೆಯನ್ನು ಕಾಂಗ್ರೆಸ್ ಮುಖಂಡರು ತಳ್ಳಿಹಾಕಿದ್ದು, ಇಂಡಿಯಾ ಎಂದರೆ ಭಾರತ ಹಾಗೂ ಒಕ್ಕೂಟ ಎನ್ನುವುದನ್ನು ನಮ್ಮ ಸಂವಿಧಾನ ಒತ್ತಿ ಹೇಳಿದೆ” ಎಂದು ಪ್ರತಿಪಾದಿಸಿದ್ದಾರೆ.

ಇಂಡಿಯಾ ಶಬ್ದವನ್ನು ಹಿಮಾಂತ ಬಿಸ್ವ ಟೀಕಿಸಿದ ಬಳಿಕ ಕಾಂಗ್ರೆಸ್ ಮುಖಂಡರು ನಿಮ್ಮ ಟ್ವಿಟ್ಟರ್ ವಿವರದಲ್ಲಿ ಇಂಡಿಯಾ ಎಂದು ಏಕೆ ಇದೆ ಹಾಗೂ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಎನ್ನುವ ಶಬ್ದಗಳು ಈಗ ಬದಲಾಗುತ್ತವೆಯೇ ಎಂದು ಅಣಕಿಸಿದ್ದರು. ಈ ಹಿನ್ನೆಲೆಯಲ್ಲಿ ಹಿಮಾಂತ, “ಚೀಫ್ ಮಿನಿಸ್ಟರ್ ಆಫ್ ಅಸ್ಸಾಂ, ಭಾರತ್” ಎಂದು ತಮ್ಮ ಟ್ವಿಟ್ಟರ್ ಖಾತೆಯನ್ನು ಬದಲಿಸಿದ್ದಾರೆ.

 

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

31 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

37 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

46 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago