BREAKING NEWS

ತೀವ್ರಗೊಂಡ ‘ಇಂಡಿಯಾ’-ಭಾರತ್ ಚರ್ಚೆ

ನವದೆಹಲಿ: ಯುಪಿಎ ಒಕ್ಕೂಟವನ್ನು ‘ಇಂಡಿಯಾ’ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್) ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ, ಇಂಡಿಯಾ ಮತ್ತು ಭಾರತ್ ಪರಿಕಲ್ಪನೆಗಳ ನಡುವೆ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿ ಹೊಂದಿದ ರಾಷ್ಟ್ರ ಮತ್ತು ಜನತೆ ಹಾಗೂ ಪ್ರದೇಶಗಳ ಆಕಾಂಕ್ಷೆಯನ್ನು ಒಳಗೊಂಡ ನವಭಾರತ ಎಂದು ವಿಶ್ಲೇಷಿಸಿದ್ದಾರೆ. ಏತನ್ಮಧ್ಯೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಮ್ಮ ಟ್ವಿಟ್ಟರ್ ವಿವರಗಳಿಂದ ಇಂಡಿಯಾ ಎಂಬ ಪದವನ್ನು ಕಿತ್ತು ಹಾಕಿ ಭಾರತ್ ಎಂದು ಹಾಕಿಕೊಂಡಿದ್ದಾರೆ.

ಇಂಡಿಯಾ ಎಂದರೆ ಭಾರತ ಅಲ್ಲ ಎಂದು ಪ್ರತಿಪಾದಿಸಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದ್ದಾರೆ.

“ಯುಪಿಎ ಇಂಡಿಯಾ ಆದ ತಕ್ಷಣ ಬಿಜೆಪಿ ಎಂದರೆ ಭಾರತ ಎಂದಾಗಿದೆ. ನಮ್ಮ ನಾಗರೀಕತೆಯ ಸಂಘರ್ಷ ಭಾರತ ಹಾಗೂ ಇಂಡಿಯಾ ನಡುವೆ ಆಗಿದೆ. ಬ್ರಿಟಿಷರು ನಮ್ಮ ದೇಶವನ್ನು ಇಂಡಿಯಾ ಎಂದು ಹೆಸರಿಸಿದರು. ಈ ಸಾಮ್ರಾಜ್ಯಶಾಹಿ ಸಿದ್ಧಾಂತಗಳಿಂದ ನಾವು ಮುಕ್ತರಾಗಲು ಪ್ರಯತ್ನಿಸಬೇಕಾಗಿದೆ. ನಮ್ಮ ಪೂರ್ವಜರು ಭಾರತಕ್ಕಾಗಿ ಹೋರಾಡಿದರು ಮತ್ತು ನಾವು ಭಾರತಕ್ಕಾಗಿ ಕೆಲಸ ಮಾಡುತ್ತೇವೆ. ಬಿಜೆಪಿ ಭಾರತಕ್ಕಾಗಿ” ಎಂದು ಹಿಮಾಂತ ಟ್ವೀಟ್ ಮಾಡಿದ್ದಾರೆ.

ಇಂಡಿಯಾ ಮತ್ತು ಭಾರತ ನಡುವಿನ ವಿಶ್ಲೇಷಣೆಯನ್ನು ಕಾಂಗ್ರೆಸ್ ಮುಖಂಡರು ತಳ್ಳಿಹಾಕಿದ್ದು, ಇಂಡಿಯಾ ಎಂದರೆ ಭಾರತ ಹಾಗೂ ಒಕ್ಕೂಟ ಎನ್ನುವುದನ್ನು ನಮ್ಮ ಸಂವಿಧಾನ ಒತ್ತಿ ಹೇಳಿದೆ” ಎಂದು ಪ್ರತಿಪಾದಿಸಿದ್ದಾರೆ.

ಇಂಡಿಯಾ ಶಬ್ದವನ್ನು ಹಿಮಾಂತ ಬಿಸ್ವ ಟೀಕಿಸಿದ ಬಳಿಕ ಕಾಂಗ್ರೆಸ್ ಮುಖಂಡರು ನಿಮ್ಮ ಟ್ವಿಟ್ಟರ್ ವಿವರದಲ್ಲಿ ಇಂಡಿಯಾ ಎಂದು ಏಕೆ ಇದೆ ಹಾಗೂ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಎನ್ನುವ ಶಬ್ದಗಳು ಈಗ ಬದಲಾಗುತ್ತವೆಯೇ ಎಂದು ಅಣಕಿಸಿದ್ದರು. ಈ ಹಿನ್ನೆಲೆಯಲ್ಲಿ ಹಿಮಾಂತ, “ಚೀಫ್ ಮಿನಿಸ್ಟರ್ ಆಫ್ ಅಸ್ಸಾಂ, ಭಾರತ್” ಎಂದು ತಮ್ಮ ಟ್ವಿಟ್ಟರ್ ಖಾತೆಯನ್ನು ಬದಲಿಸಿದ್ದಾರೆ.

 

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

5 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

5 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

6 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

6 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

6 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

6 hours ago