BREAKING NEWS

ತೀವ್ರಗೊಂಡ ‘ಇಂಡಿಯಾ’-ಭಾರತ್ ಚರ್ಚೆ

ನವದೆಹಲಿ: ಯುಪಿಎ ಒಕ್ಕೂಟವನ್ನು ‘ಇಂಡಿಯಾ’ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್) ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ, ಇಂಡಿಯಾ ಮತ್ತು ಭಾರತ್ ಪರಿಕಲ್ಪನೆಗಳ ನಡುವೆ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿ ಹೊಂದಿದ ರಾಷ್ಟ್ರ ಮತ್ತು ಜನತೆ ಹಾಗೂ ಪ್ರದೇಶಗಳ ಆಕಾಂಕ್ಷೆಯನ್ನು ಒಳಗೊಂಡ ನವಭಾರತ ಎಂದು ವಿಶ್ಲೇಷಿಸಿದ್ದಾರೆ. ಏತನ್ಮಧ್ಯೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಮ್ಮ ಟ್ವಿಟ್ಟರ್ ವಿವರಗಳಿಂದ ಇಂಡಿಯಾ ಎಂಬ ಪದವನ್ನು ಕಿತ್ತು ಹಾಕಿ ಭಾರತ್ ಎಂದು ಹಾಕಿಕೊಂಡಿದ್ದಾರೆ.

ಇಂಡಿಯಾ ಎಂದರೆ ಭಾರತ ಅಲ್ಲ ಎಂದು ಪ್ರತಿಪಾದಿಸಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದ್ದಾರೆ.

“ಯುಪಿಎ ಇಂಡಿಯಾ ಆದ ತಕ್ಷಣ ಬಿಜೆಪಿ ಎಂದರೆ ಭಾರತ ಎಂದಾಗಿದೆ. ನಮ್ಮ ನಾಗರೀಕತೆಯ ಸಂಘರ್ಷ ಭಾರತ ಹಾಗೂ ಇಂಡಿಯಾ ನಡುವೆ ಆಗಿದೆ. ಬ್ರಿಟಿಷರು ನಮ್ಮ ದೇಶವನ್ನು ಇಂಡಿಯಾ ಎಂದು ಹೆಸರಿಸಿದರು. ಈ ಸಾಮ್ರಾಜ್ಯಶಾಹಿ ಸಿದ್ಧಾಂತಗಳಿಂದ ನಾವು ಮುಕ್ತರಾಗಲು ಪ್ರಯತ್ನಿಸಬೇಕಾಗಿದೆ. ನಮ್ಮ ಪೂರ್ವಜರು ಭಾರತಕ್ಕಾಗಿ ಹೋರಾಡಿದರು ಮತ್ತು ನಾವು ಭಾರತಕ್ಕಾಗಿ ಕೆಲಸ ಮಾಡುತ್ತೇವೆ. ಬಿಜೆಪಿ ಭಾರತಕ್ಕಾಗಿ” ಎಂದು ಹಿಮಾಂತ ಟ್ವೀಟ್ ಮಾಡಿದ್ದಾರೆ.

ಇಂಡಿಯಾ ಮತ್ತು ಭಾರತ ನಡುವಿನ ವಿಶ್ಲೇಷಣೆಯನ್ನು ಕಾಂಗ್ರೆಸ್ ಮುಖಂಡರು ತಳ್ಳಿಹಾಕಿದ್ದು, ಇಂಡಿಯಾ ಎಂದರೆ ಭಾರತ ಹಾಗೂ ಒಕ್ಕೂಟ ಎನ್ನುವುದನ್ನು ನಮ್ಮ ಸಂವಿಧಾನ ಒತ್ತಿ ಹೇಳಿದೆ” ಎಂದು ಪ್ರತಿಪಾದಿಸಿದ್ದಾರೆ.

ಇಂಡಿಯಾ ಶಬ್ದವನ್ನು ಹಿಮಾಂತ ಬಿಸ್ವ ಟೀಕಿಸಿದ ಬಳಿಕ ಕಾಂಗ್ರೆಸ್ ಮುಖಂಡರು ನಿಮ್ಮ ಟ್ವಿಟ್ಟರ್ ವಿವರದಲ್ಲಿ ಇಂಡಿಯಾ ಎಂದು ಏಕೆ ಇದೆ ಹಾಗೂ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಎನ್ನುವ ಶಬ್ದಗಳು ಈಗ ಬದಲಾಗುತ್ತವೆಯೇ ಎಂದು ಅಣಕಿಸಿದ್ದರು. ಈ ಹಿನ್ನೆಲೆಯಲ್ಲಿ ಹಿಮಾಂತ, “ಚೀಫ್ ಮಿನಿಸ್ಟರ್ ಆಫ್ ಅಸ್ಸಾಂ, ಭಾರತ್” ಎಂದು ತಮ್ಮ ಟ್ವಿಟ್ಟರ್ ಖಾತೆಯನ್ನು ಬದಲಿಸಿದ್ದಾರೆ.

 

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

55 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

58 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

1 hour ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

1 hour ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

1 hour ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago