BREAKING NEWS

ಚೆಕ್‌ ಪೋಸ್ಟ್‌ನಲ್ಲಿ ತೀವ್ರ ಶೋಧ, 30 ಟನ್‌ ಅಕ್ಕಿ, 1.41 ಲಕ್ಷ ರೂ. ನಗದು, 55 ಲೀಟರ್‌ ಮದ್ಯ ವಶ

ರಾಮನಗರ : ಜಿಲ್ಲೆಯ ಗಡಿಭಾಗ ಕೋಲೂರು ಗ್ರಾಮದ ಬಳಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್‌ ಇಲಾಖೆ ತಪಾಸಣೆಯನ್ನು ಚುರುಕುಗೊಳಿಸಿದ್ದು, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 30 ಟನ್‌ ಅಕ್ಕಿ ಮತ್ತು 1.41 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 30 ರ ಮಧ್ಯಾಹ್ನ ಚೆಕ್‌ಪೋಸ್ಟ್‌ನಲ್ಲಿದ್ದ ಸಿಬ್ಬಂದಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಮಯದಲ್ಲಿ ಕ್ಯಾಂಟರ್‌ನಲ್ಲಿಅಕ್ರಮವಾಗಿ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದದ್ದು ಪತ್ತೆಯಾಗಿದೆ. ಅಕ್ಕಿಯ ಬಗ್ಗೆ ಕ್ಯಾಂಟರ್‌ ಚಾಲಕ ದಾಖಲೆ ನೀಡಲು ವಿಫಲಗೊಂಡಿದ್ದಾನೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದ ವೇಳೆ ಚಾಲಕ ಪರಾರಿಯಾಗಿದ್ದು, ಅಕ್ಕಿ ಚೀಲಗಳ ಸಮೇತ ಕ್ಯಾಂಟರ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಪಡಿತರ ಅಕ್ಕಿ ಕಾಳಸಂತೆ : ಕ್ಯಾಂಟರ್‌ನಲ್ಲಿ 50 ಕೆ.ಜಿ.ತೂಕದ 600 ಚೀಲ ಅಕ್ಕಿ ಇದ್ದು, ಇದರ ಬೆಲೆ ಸುಮಾರು 16.60 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಳವಳ್ಳಿಯಿಂದ ಬೆಂಗಳೂರಿಗೆ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದು, ಮೇಲ್ನೋಟಕ್ಕೆ ಪಡಿತರ ಅಕ್ಕಿ ಎಂದು ಶಂಕಿಸಲಾಗಿದೆ. ಕಾಳಸಂತೆಯಲ್ಲಿ ಮಾರಾಟಮಾಡಲು ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಯಾಂಟರ್‌ ಚಾಲಕ ತಮಿಳುನಾಡು ಮೂಲದ ಸತೀಶ್‌ ಮತ್ತು ಕ್ಯಾಂಟರ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

55 ಲೀಟರ್‌ ಮದ್ಯ ವಶ : ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 55 ಲೀಟರ್‌ ಮದ್ಯವನ್ನು ಚನ್ನಪಟ್ಟಣ ತಾಲೂಕಿನ ವಿವಿಧೆಡೆ ದಾಳಿಮಾಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸಭಾ ಚುನಾವಣಾ ಹಿನ್ನಲೆ, ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಹೈ ಅಲರ್ಟ್‌ ಆಗಿದ್ದಾರೆ. ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ನಿರಂತರವಾಗಿ ದಾಳಿಮಾಡಿರುವ ಪೊಲೀಸರು ಇದುವರೆಗೆ 55 ಸಾವಿರ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

1.41 ಲಕ್ಷ ರೂ ನಗದು ವಶಕ್ಕೆ : ಯಾವುದೇ ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ 1.41 ಲಕ್ಷ ರೂ. ಹಣವನ್ನು ಚುನಾವಣಾ ಕರ್ತವ್ಯದಲ್ಲಿ ನಿತರವಾಗಿದ್ದ ವಿಶೇಷ ತಂಡ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಕೋಲೂರು ಚೆಕ್‌ಪೋಸ್ಟ್‌ ಬಳಿ ನಡೆದಿದೆ.

ವ್ಯಕ್ತಿ ವಿರುದ್ಧ ಪ್ರಕರಣ ದಾಖಲು : ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡುತ್ತಿರುವ ವಿಶೇಷ ಕಾರ್ಯಾಚರಣೆ ತಂಡ ಚೆಕ್‌ಪೋಸ್ಟ್‌ ಬಳಿ ಅಶೋಕ್‌ ಲೈಲ್ಯಾಂಡ್‌ ಗೂಡ್ಸ್‌ ವಾಹನವನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ, ವಾಹನದಲ್ಲಿದ್ದ ಯುಕನ ಬಳಿ 1.41 ಲಕ್ಷ ರೂ. ಪತ್ತೆಯಾಗಿದೆ. ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಹಣ ಹೊಂದಿದ್ದ ತಾಲೂಕಿನ ಮಳೂರು ಪಟ್ಟಣ ಗ್ರಾಮದ ರಕ್ಷಿತ್‌ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೂಕ್ತ ದಾಖಲೆ ಇಲ್ಲದ 36 ಲಕ್ಷ ರೂ. ವಶ : ಚಿಕ್ಕಮಗಳೂರು ಜಿಲ್ಲೆಯ, ತರೀಕೆರೆ ತಾಲೂಕಿನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 36 ಲಕ್ಷ ರೂ.ಗಳನ್ನು ವಶಕ್ಕೆ ಪಡೆದಿರುವ ಘಟನೆ ಮಾರ್ಚ್ 30 ರಂದು ಲಕ್ಕವಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ರಂಗೇನಹಳ್ಳಿ ಕಡೆಗೆ ತೆರಳುತ್ತಿದ್ದ ಕಾರನ್ನು ಎಂ.ಎನ್‌.ಕ್ಯಾಂಪ್‌ ಬಳಿ ಚುನಾವಣೆ ಚೆಕ್‌ ಪೋಸ್ಟ್‌ನಲ್ಲಿ ತಪಾಸಣೆಗೆ ಒಳಪಡಿಸಿದಾಗ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ. ಈ ಬಗ್ಗೆ ಲಕ್ಕವಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.

lokesh

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

2 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

2 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

2 hours ago