BREAKING NEWS

ಐಪಿಎಲ್‌ 2024: ಆರ್‌ಸಿಬಿಯ ಅತಿಹೆಚ್ಚು ರನ್‌ ಬೃಹತ್‌ ದಾಖಲೆ ಮುರಿದ ಸನ್‌ರೈಸರ್ಸ್‌

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್‌ ಆಯ್ದುಕೊಂಡು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 277 ರನ್‌ ಕಲೆಹಾಕಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ 278 ರನ್‌ಗಳ ದಾಖಲೆಯ ಗುರಿಯನ್ನು ನೀಡಿತು. ಈ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿ ಅತಿಹೆಚ್ಚು ರನ್‌ ಬಾರಿಸಿದ ತಂಡ ಎಂಬ ದಾಖಲೆ ನಿರ್ಮಿಸಿತು. ಈ ಮೂಲಕ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ 11 ವರ್ಷಗಳ ಹಿಂದಿನ ಬೃಹತ್‌ ದಾಖಲೆಯನ್ನು ಮುರಿಯಿತು.

ಸನ್‌ರೈಸರ್ಸ್‌ ಹೈದರಾಬಾದ್:‌ ತಂಡದ ಪರ ಮಯಾಂಕ್‌ ಅಗರ್ವಾಲ್‌ ಮತ್ತು ಟ್ರಾವಿಸ್‌ ಹೆಡ್‌ ಆರಂಭಿಕರಾಗಿ ಕಣಕ್ಕಿಳಿದರು. ಮಯಾಂಕ್‌ 11 (13) ರನ್‌ಗೆ ಔಟ್‌ ಆದರು. ಬಳಿಕ ಕಣಕ್ಕಿಳಿದ ಎಲ್ಲಾ ನಾಲ್ವರೂ ಬ್ಯಾಟ್ಸ್‌ಮನ್‌ಗಳೂ ವಿಶ್ವರೂಪ ತೋರಿದರು. ಆರಂಭದಿಂದ ಅಂತ್ಯದವರೆಗೂ ಮುಂಬೈ ಇಂಡಿಯನ್ಸ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಟ್ರಾವಿಸ್‌ ಹೆಡ್ 24 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 62 ರನ್‌ ಬಾರಿಸಿದರೆ, ಅಭಿಷೇಕ್‌ ಶರ್ಮಾ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 63 ರನ್‌ ಬಾರಿಸಿದರು. ಏಡನ್‌ ಮಾರ್ಕ್ರಮ್‌ 28 ಎಸೆತಗಳಲ್ಲಿ ಅಜೇಯ 42 ರನ್‌ ಬಾರಿಸಿದರು ಮತ್ತು ಹೆನ್ರಿಕ್‌ ಕ್ಲಾಸೆನ್‌ 34 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ ಅಜೇಯ 80 ರನ್‌ ಬಾರಿಸಿ ಅಬ್ಬರಿಸಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ ಹೊರತುಪಡಿಸಿ ಉಳಿದೆಲ್ಲಾ ಬೌಲರ್‌ಗಳೂ 11ಕ್ಕಿಂತ ಹೆಚ್ಚಿನ ಎಕಾನಮಿಯಲ್ಲಿ ಬೌಲಿಂಗ್‌ ಮಾಡಿ ದುಬಾರಿಯಾದರು. ಹಾರ್ದಿಕ್‌ ಪಾಂಡ್ಯ, ಗೆರಾಲ್ಡ್‌ ಸೋಟ್ಜೆ ಹಾಗೂ ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದರು.

 

ಐಪಿಎಲ್‌ನಲ್ಲಿ ಅತಿಹೆಚ್ಚು ರನ್‌ ದಾಖಲಿಸಿದ ತಂಡಗಳು – ಟಾಪ್‌ 3
1. ಸನ್‌ರೈಸರ್ಸ್‌ ಹೈದರಾಬಾದ್‌ vs ಮುಂಬೈ ಇಂಡಿಯನ್ಸ್‌ ( 27 ಮಾರ್ಚ್ 2024 ) – 277/3
2. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಪುಣೆ ವಾರಿಯರ್ಸ್‌ ( 23 ಏಪ್ರಿಲ್‌ 2013 ) – 263/5
3. ಲಕ್ನೋ ಸೂಪರ್‌ ಜೈಂಟ್ಸ್‌ vs ಪಂಜಾಬ್‌ ಕಿಂಗ್ಸ್‌ ( 28 ಏಪ್ರಿಲ್‌ 2023 ) – 257/5

andolana

Recent Posts

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

7 mins ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

37 mins ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

1 hour ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

3 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

3 hours ago

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

4 hours ago