BREAKING NEWS

ಐಪಿಎಲ್‌ 2024: ಆರ್‌ಸಿಬಿಯ ಅತಿಹೆಚ್ಚು ರನ್‌ ಬೃಹತ್‌ ದಾಖಲೆ ಮುರಿದ ಸನ್‌ರೈಸರ್ಸ್‌

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್‌ ಆಯ್ದುಕೊಂಡು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 277 ರನ್‌ ಕಲೆಹಾಕಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ 278 ರನ್‌ಗಳ ದಾಖಲೆಯ ಗುರಿಯನ್ನು ನೀಡಿತು. ಈ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿ ಅತಿಹೆಚ್ಚು ರನ್‌ ಬಾರಿಸಿದ ತಂಡ ಎಂಬ ದಾಖಲೆ ನಿರ್ಮಿಸಿತು. ಈ ಮೂಲಕ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ 11 ವರ್ಷಗಳ ಹಿಂದಿನ ಬೃಹತ್‌ ದಾಖಲೆಯನ್ನು ಮುರಿಯಿತು.

ಸನ್‌ರೈಸರ್ಸ್‌ ಹೈದರಾಬಾದ್:‌ ತಂಡದ ಪರ ಮಯಾಂಕ್‌ ಅಗರ್ವಾಲ್‌ ಮತ್ತು ಟ್ರಾವಿಸ್‌ ಹೆಡ್‌ ಆರಂಭಿಕರಾಗಿ ಕಣಕ್ಕಿಳಿದರು. ಮಯಾಂಕ್‌ 11 (13) ರನ್‌ಗೆ ಔಟ್‌ ಆದರು. ಬಳಿಕ ಕಣಕ್ಕಿಳಿದ ಎಲ್ಲಾ ನಾಲ್ವರೂ ಬ್ಯಾಟ್ಸ್‌ಮನ್‌ಗಳೂ ವಿಶ್ವರೂಪ ತೋರಿದರು. ಆರಂಭದಿಂದ ಅಂತ್ಯದವರೆಗೂ ಮುಂಬೈ ಇಂಡಿಯನ್ಸ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಟ್ರಾವಿಸ್‌ ಹೆಡ್ 24 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 62 ರನ್‌ ಬಾರಿಸಿದರೆ, ಅಭಿಷೇಕ್‌ ಶರ್ಮಾ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 63 ರನ್‌ ಬಾರಿಸಿದರು. ಏಡನ್‌ ಮಾರ್ಕ್ರಮ್‌ 28 ಎಸೆತಗಳಲ್ಲಿ ಅಜೇಯ 42 ರನ್‌ ಬಾರಿಸಿದರು ಮತ್ತು ಹೆನ್ರಿಕ್‌ ಕ್ಲಾಸೆನ್‌ 34 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ ಅಜೇಯ 80 ರನ್‌ ಬಾರಿಸಿ ಅಬ್ಬರಿಸಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ ಹೊರತುಪಡಿಸಿ ಉಳಿದೆಲ್ಲಾ ಬೌಲರ್‌ಗಳೂ 11ಕ್ಕಿಂತ ಹೆಚ್ಚಿನ ಎಕಾನಮಿಯಲ್ಲಿ ಬೌಲಿಂಗ್‌ ಮಾಡಿ ದುಬಾರಿಯಾದರು. ಹಾರ್ದಿಕ್‌ ಪಾಂಡ್ಯ, ಗೆರಾಲ್ಡ್‌ ಸೋಟ್ಜೆ ಹಾಗೂ ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದರು.

 

ಐಪಿಎಲ್‌ನಲ್ಲಿ ಅತಿಹೆಚ್ಚು ರನ್‌ ದಾಖಲಿಸಿದ ತಂಡಗಳು – ಟಾಪ್‌ 3
1. ಸನ್‌ರೈಸರ್ಸ್‌ ಹೈದರಾಬಾದ್‌ vs ಮುಂಬೈ ಇಂಡಿಯನ್ಸ್‌ ( 27 ಮಾರ್ಚ್ 2024 ) – 277/3
2. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಪುಣೆ ವಾರಿಯರ್ಸ್‌ ( 23 ಏಪ್ರಿಲ್‌ 2013 ) – 263/5
3. ಲಕ್ನೋ ಸೂಪರ್‌ ಜೈಂಟ್ಸ್‌ vs ಪಂಜಾಬ್‌ ಕಿಂಗ್ಸ್‌ ( 28 ಏಪ್ರಿಲ್‌ 2023 ) – 257/5

andolana

Recent Posts

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

15 mins ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

17 mins ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

30 mins ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

36 mins ago

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…

57 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

2 hours ago