BREAKING NEWS

ಐಪಿಎಲ್‌ 2024: ಆರ್‌ಸಿಬಿಯ ಅತಿಹೆಚ್ಚು ರನ್‌ ಬೃಹತ್‌ ದಾಖಲೆ ಮುರಿದ ಸನ್‌ರೈಸರ್ಸ್‌

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್‌ ಆಯ್ದುಕೊಂಡು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 277 ರನ್‌ ಕಲೆಹಾಕಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ 278 ರನ್‌ಗಳ ದಾಖಲೆಯ ಗುರಿಯನ್ನು ನೀಡಿತು. ಈ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿ ಅತಿಹೆಚ್ಚು ರನ್‌ ಬಾರಿಸಿದ ತಂಡ ಎಂಬ ದಾಖಲೆ ನಿರ್ಮಿಸಿತು. ಈ ಮೂಲಕ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ 11 ವರ್ಷಗಳ ಹಿಂದಿನ ಬೃಹತ್‌ ದಾಖಲೆಯನ್ನು ಮುರಿಯಿತು.

ಸನ್‌ರೈಸರ್ಸ್‌ ಹೈದರಾಬಾದ್:‌ ತಂಡದ ಪರ ಮಯಾಂಕ್‌ ಅಗರ್ವಾಲ್‌ ಮತ್ತು ಟ್ರಾವಿಸ್‌ ಹೆಡ್‌ ಆರಂಭಿಕರಾಗಿ ಕಣಕ್ಕಿಳಿದರು. ಮಯಾಂಕ್‌ 11 (13) ರನ್‌ಗೆ ಔಟ್‌ ಆದರು. ಬಳಿಕ ಕಣಕ್ಕಿಳಿದ ಎಲ್ಲಾ ನಾಲ್ವರೂ ಬ್ಯಾಟ್ಸ್‌ಮನ್‌ಗಳೂ ವಿಶ್ವರೂಪ ತೋರಿದರು. ಆರಂಭದಿಂದ ಅಂತ್ಯದವರೆಗೂ ಮುಂಬೈ ಇಂಡಿಯನ್ಸ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಟ್ರಾವಿಸ್‌ ಹೆಡ್ 24 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 62 ರನ್‌ ಬಾರಿಸಿದರೆ, ಅಭಿಷೇಕ್‌ ಶರ್ಮಾ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 63 ರನ್‌ ಬಾರಿಸಿದರು. ಏಡನ್‌ ಮಾರ್ಕ್ರಮ್‌ 28 ಎಸೆತಗಳಲ್ಲಿ ಅಜೇಯ 42 ರನ್‌ ಬಾರಿಸಿದರು ಮತ್ತು ಹೆನ್ರಿಕ್‌ ಕ್ಲಾಸೆನ್‌ 34 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ ಅಜೇಯ 80 ರನ್‌ ಬಾರಿಸಿ ಅಬ್ಬರಿಸಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ ಹೊರತುಪಡಿಸಿ ಉಳಿದೆಲ್ಲಾ ಬೌಲರ್‌ಗಳೂ 11ಕ್ಕಿಂತ ಹೆಚ್ಚಿನ ಎಕಾನಮಿಯಲ್ಲಿ ಬೌಲಿಂಗ್‌ ಮಾಡಿ ದುಬಾರಿಯಾದರು. ಹಾರ್ದಿಕ್‌ ಪಾಂಡ್ಯ, ಗೆರಾಲ್ಡ್‌ ಸೋಟ್ಜೆ ಹಾಗೂ ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದರು.

 

ಐಪಿಎಲ್‌ನಲ್ಲಿ ಅತಿಹೆಚ್ಚು ರನ್‌ ದಾಖಲಿಸಿದ ತಂಡಗಳು – ಟಾಪ್‌ 3
1. ಸನ್‌ರೈಸರ್ಸ್‌ ಹೈದರಾಬಾದ್‌ vs ಮುಂಬೈ ಇಂಡಿಯನ್ಸ್‌ ( 27 ಮಾರ್ಚ್ 2024 ) – 277/3
2. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಪುಣೆ ವಾರಿಯರ್ಸ್‌ ( 23 ಏಪ್ರಿಲ್‌ 2013 ) – 263/5
3. ಲಕ್ನೋ ಸೂಪರ್‌ ಜೈಂಟ್ಸ್‌ vs ಪಂಜಾಬ್‌ ಕಿಂಗ್ಸ್‌ ( 28 ಏಪ್ರಿಲ್‌ 2023 ) – 257/5

andolana

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

34 mins ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

36 mins ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

37 mins ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

40 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

46 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

52 mins ago