BREAKING NEWS

ಐಪಿಎಲ್‌ 2024: ಆರ್‌ಸಿಬಿಯ ಅತಿಹೆಚ್ಚು ರನ್‌ ಬೃಹತ್‌ ದಾಖಲೆ ಮುರಿದ ಸನ್‌ರೈಸರ್ಸ್‌

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್‌ ಆಯ್ದುಕೊಂಡು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 277 ರನ್‌ ಕಲೆಹಾಕಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ 278 ರನ್‌ಗಳ ದಾಖಲೆಯ ಗುರಿಯನ್ನು ನೀಡಿತು. ಈ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿ ಅತಿಹೆಚ್ಚು ರನ್‌ ಬಾರಿಸಿದ ತಂಡ ಎಂಬ ದಾಖಲೆ ನಿರ್ಮಿಸಿತು. ಈ ಮೂಲಕ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ 11 ವರ್ಷಗಳ ಹಿಂದಿನ ಬೃಹತ್‌ ದಾಖಲೆಯನ್ನು ಮುರಿಯಿತು.

ಸನ್‌ರೈಸರ್ಸ್‌ ಹೈದರಾಬಾದ್:‌ ತಂಡದ ಪರ ಮಯಾಂಕ್‌ ಅಗರ್ವಾಲ್‌ ಮತ್ತು ಟ್ರಾವಿಸ್‌ ಹೆಡ್‌ ಆರಂಭಿಕರಾಗಿ ಕಣಕ್ಕಿಳಿದರು. ಮಯಾಂಕ್‌ 11 (13) ರನ್‌ಗೆ ಔಟ್‌ ಆದರು. ಬಳಿಕ ಕಣಕ್ಕಿಳಿದ ಎಲ್ಲಾ ನಾಲ್ವರೂ ಬ್ಯಾಟ್ಸ್‌ಮನ್‌ಗಳೂ ವಿಶ್ವರೂಪ ತೋರಿದರು. ಆರಂಭದಿಂದ ಅಂತ್ಯದವರೆಗೂ ಮುಂಬೈ ಇಂಡಿಯನ್ಸ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಟ್ರಾವಿಸ್‌ ಹೆಡ್ 24 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 62 ರನ್‌ ಬಾರಿಸಿದರೆ, ಅಭಿಷೇಕ್‌ ಶರ್ಮಾ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 63 ರನ್‌ ಬಾರಿಸಿದರು. ಏಡನ್‌ ಮಾರ್ಕ್ರಮ್‌ 28 ಎಸೆತಗಳಲ್ಲಿ ಅಜೇಯ 42 ರನ್‌ ಬಾರಿಸಿದರು ಮತ್ತು ಹೆನ್ರಿಕ್‌ ಕ್ಲಾಸೆನ್‌ 34 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ ಅಜೇಯ 80 ರನ್‌ ಬಾರಿಸಿ ಅಬ್ಬರಿಸಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ ಹೊರತುಪಡಿಸಿ ಉಳಿದೆಲ್ಲಾ ಬೌಲರ್‌ಗಳೂ 11ಕ್ಕಿಂತ ಹೆಚ್ಚಿನ ಎಕಾನಮಿಯಲ್ಲಿ ಬೌಲಿಂಗ್‌ ಮಾಡಿ ದುಬಾರಿಯಾದರು. ಹಾರ್ದಿಕ್‌ ಪಾಂಡ್ಯ, ಗೆರಾಲ್ಡ್‌ ಸೋಟ್ಜೆ ಹಾಗೂ ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದರು.

 

ಐಪಿಎಲ್‌ನಲ್ಲಿ ಅತಿಹೆಚ್ಚು ರನ್‌ ದಾಖಲಿಸಿದ ತಂಡಗಳು – ಟಾಪ್‌ 3
1. ಸನ್‌ರೈಸರ್ಸ್‌ ಹೈದರಾಬಾದ್‌ vs ಮುಂಬೈ ಇಂಡಿಯನ್ಸ್‌ ( 27 ಮಾರ್ಚ್ 2024 ) – 277/3
2. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಪುಣೆ ವಾರಿಯರ್ಸ್‌ ( 23 ಏಪ್ರಿಲ್‌ 2013 ) – 263/5
3. ಲಕ್ನೋ ಸೂಪರ್‌ ಜೈಂಟ್ಸ್‌ vs ಪಂಜಾಬ್‌ ಕಿಂಗ್ಸ್‌ ( 28 ಏಪ್ರಿಲ್‌ 2023 ) – 257/5

andolana

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

46 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago