BREAKING NEWS

ಐಪಿಎಲ್‌ 2024: ಆರ್‌ಸಿಬಿಯ ಅತಿಹೆಚ್ಚು ರನ್‌ ಬೃಹತ್‌ ದಾಖಲೆ ಮುರಿದ ಸನ್‌ರೈಸರ್ಸ್‌

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್‌ ಆಯ್ದುಕೊಂಡು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 277 ರನ್‌ ಕಲೆಹಾಕಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ 278 ರನ್‌ಗಳ ದಾಖಲೆಯ ಗುರಿಯನ್ನು ನೀಡಿತು. ಈ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿ ಅತಿಹೆಚ್ಚು ರನ್‌ ಬಾರಿಸಿದ ತಂಡ ಎಂಬ ದಾಖಲೆ ನಿರ್ಮಿಸಿತು. ಈ ಮೂಲಕ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ 11 ವರ್ಷಗಳ ಹಿಂದಿನ ಬೃಹತ್‌ ದಾಖಲೆಯನ್ನು ಮುರಿಯಿತು.

ಸನ್‌ರೈಸರ್ಸ್‌ ಹೈದರಾಬಾದ್:‌ ತಂಡದ ಪರ ಮಯಾಂಕ್‌ ಅಗರ್ವಾಲ್‌ ಮತ್ತು ಟ್ರಾವಿಸ್‌ ಹೆಡ್‌ ಆರಂಭಿಕರಾಗಿ ಕಣಕ್ಕಿಳಿದರು. ಮಯಾಂಕ್‌ 11 (13) ರನ್‌ಗೆ ಔಟ್‌ ಆದರು. ಬಳಿಕ ಕಣಕ್ಕಿಳಿದ ಎಲ್ಲಾ ನಾಲ್ವರೂ ಬ್ಯಾಟ್ಸ್‌ಮನ್‌ಗಳೂ ವಿಶ್ವರೂಪ ತೋರಿದರು. ಆರಂಭದಿಂದ ಅಂತ್ಯದವರೆಗೂ ಮುಂಬೈ ಇಂಡಿಯನ್ಸ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಟ್ರಾವಿಸ್‌ ಹೆಡ್ 24 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 62 ರನ್‌ ಬಾರಿಸಿದರೆ, ಅಭಿಷೇಕ್‌ ಶರ್ಮಾ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 63 ರನ್‌ ಬಾರಿಸಿದರು. ಏಡನ್‌ ಮಾರ್ಕ್ರಮ್‌ 28 ಎಸೆತಗಳಲ್ಲಿ ಅಜೇಯ 42 ರನ್‌ ಬಾರಿಸಿದರು ಮತ್ತು ಹೆನ್ರಿಕ್‌ ಕ್ಲಾಸೆನ್‌ 34 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ ಅಜೇಯ 80 ರನ್‌ ಬಾರಿಸಿ ಅಬ್ಬರಿಸಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ ಹೊರತುಪಡಿಸಿ ಉಳಿದೆಲ್ಲಾ ಬೌಲರ್‌ಗಳೂ 11ಕ್ಕಿಂತ ಹೆಚ್ಚಿನ ಎಕಾನಮಿಯಲ್ಲಿ ಬೌಲಿಂಗ್‌ ಮಾಡಿ ದುಬಾರಿಯಾದರು. ಹಾರ್ದಿಕ್‌ ಪಾಂಡ್ಯ, ಗೆರಾಲ್ಡ್‌ ಸೋಟ್ಜೆ ಹಾಗೂ ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದರು.

 

ಐಪಿಎಲ್‌ನಲ್ಲಿ ಅತಿಹೆಚ್ಚು ರನ್‌ ದಾಖಲಿಸಿದ ತಂಡಗಳು – ಟಾಪ್‌ 3
1. ಸನ್‌ರೈಸರ್ಸ್‌ ಹೈದರಾಬಾದ್‌ vs ಮುಂಬೈ ಇಂಡಿಯನ್ಸ್‌ ( 27 ಮಾರ್ಚ್ 2024 ) – 277/3
2. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಪುಣೆ ವಾರಿಯರ್ಸ್‌ ( 23 ಏಪ್ರಿಲ್‌ 2013 ) – 263/5
3. ಲಕ್ನೋ ಸೂಪರ್‌ ಜೈಂಟ್ಸ್‌ vs ಪಂಜಾಬ್‌ ಕಿಂಗ್ಸ್‌ ( 28 ಏಪ್ರಿಲ್‌ 2023 ) – 257/5

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

16 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago