BREAKING NEWS

IPL | ಕಾಲಿಗೆ ಗಾಯ ಮಾಡಿಕೊಂಡ ಧೋನಿ ಅಭ್ಯಾಸದಿಂದ ದೂರ: ಗುಜರಾತ್ ವಿರುದ್ಧ ಆಡುವರೇ?

ಅಹಮದಾಬಾದ್‌: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಅವರು ಆಡುವರೇ ಎಂಬುದರ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

ಆದರೆ, ಇಂದಿನ ಪಂದ್ಯದಲ್ಲಿ ಧೋನಿ ಇರಲಿದ್ದಾರೆ ಎಂದಿರುವ ತಂಡದ ಸಿಇಒ ಅಭಿಮಾನಿಗಳ ದುಗುಡ ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.

‌41ರ ಹರೆಯದ ಭಾರತ ತಂಡದ ಮಾಜಿ ನಾಯಕ ಚೆನ್ನೈನಲ್ಲಿ ನಡೆದ ತರಬೇತಿ ವೇಳೆ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಗುರುವಾರ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸದಲ್ಲಿ ಅವರು ಪಾಲ್ಗೊಳ್ಳಲಿಲ್ಲ.

ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್‌ ಅವರನ್ನು ಈ ಬಗ್ಗೆ ಕೇಳಿದಾಗ, ‘ನನ್ನ ಮಟ್ಟಿಗೆ, ಧೋನಿ ಆಡುವುದು ಶೇ 100 ರಷ್ಟು ಖಚಿತ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ’ ಎಂದು ಹೇಳಿದರು.

ಒಂದು ವೇಳೆ ಧೋನಿ ಆಡದಿದ್ದಲ್ಲಿ, ಡೆವೊನ್ ಕಾನ್ವೇ ಅಥವಾ ಅಂಬಟಿ ರಾಯುಡು ಅವರಲ್ಲಿ ಒಬ್ಬರು ವಿಕೆಟ್ ಕೀಪರ್‌ ಆಗಬಹುದು.

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

2 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

3 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

3 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

3 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

3 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

4 hours ago