ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಅವರು ಆಡುವರೇ ಎಂಬುದರ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
ಆದರೆ, ಇಂದಿನ ಪಂದ್ಯದಲ್ಲಿ ಧೋನಿ ಇರಲಿದ್ದಾರೆ ಎಂದಿರುವ ತಂಡದ ಸಿಇಒ ಅಭಿಮಾನಿಗಳ ದುಗುಡ ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
41ರ ಹರೆಯದ ಭಾರತ ತಂಡದ ಮಾಜಿ ನಾಯಕ ಚೆನ್ನೈನಲ್ಲಿ ನಡೆದ ತರಬೇತಿ ವೇಳೆ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಗುರುವಾರ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸದಲ್ಲಿ ಅವರು ಪಾಲ್ಗೊಳ್ಳಲಿಲ್ಲ.
ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಅವರನ್ನು ಈ ಬಗ್ಗೆ ಕೇಳಿದಾಗ, ‘ನನ್ನ ಮಟ್ಟಿಗೆ, ಧೋನಿ ಆಡುವುದು ಶೇ 100 ರಷ್ಟು ಖಚಿತ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ’ ಎಂದು ಹೇಳಿದರು.
ಒಂದು ವೇಳೆ ಧೋನಿ ಆಡದಿದ್ದಲ್ಲಿ, ಡೆವೊನ್ ಕಾನ್ವೇ ಅಥವಾ ಅಂಬಟಿ ರಾಯುಡು ಅವರಲ್ಲಿ ಒಬ್ಬರು ವಿಕೆಟ್ ಕೀಪರ್ ಆಗಬಹುದು.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…