ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಅವರು ಆಡುವರೇ ಎಂಬುದರ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
ಆದರೆ, ಇಂದಿನ ಪಂದ್ಯದಲ್ಲಿ ಧೋನಿ ಇರಲಿದ್ದಾರೆ ಎಂದಿರುವ ತಂಡದ ಸಿಇಒ ಅಭಿಮಾನಿಗಳ ದುಗುಡ ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
41ರ ಹರೆಯದ ಭಾರತ ತಂಡದ ಮಾಜಿ ನಾಯಕ ಚೆನ್ನೈನಲ್ಲಿ ನಡೆದ ತರಬೇತಿ ವೇಳೆ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಗುರುವಾರ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸದಲ್ಲಿ ಅವರು ಪಾಲ್ಗೊಳ್ಳಲಿಲ್ಲ.
ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಅವರನ್ನು ಈ ಬಗ್ಗೆ ಕೇಳಿದಾಗ, ‘ನನ್ನ ಮಟ್ಟಿಗೆ, ಧೋನಿ ಆಡುವುದು ಶೇ 100 ರಷ್ಟು ಖಚಿತ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ’ ಎಂದು ಹೇಳಿದರು.
ಒಂದು ವೇಳೆ ಧೋನಿ ಆಡದಿದ್ದಲ್ಲಿ, ಡೆವೊನ್ ಕಾನ್ವೇ ಅಥವಾ ಅಂಬಟಿ ರಾಯುಡು ಅವರಲ್ಲಿ ಒಬ್ಬರು ವಿಕೆಟ್ ಕೀಪರ್ ಆಗಬಹುದು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…