ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಅವರು ಆಡುವರೇ ಎಂಬುದರ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
ಆದರೆ, ಇಂದಿನ ಪಂದ್ಯದಲ್ಲಿ ಧೋನಿ ಇರಲಿದ್ದಾರೆ ಎಂದಿರುವ ತಂಡದ ಸಿಇಒ ಅಭಿಮಾನಿಗಳ ದುಗುಡ ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
41ರ ಹರೆಯದ ಭಾರತ ತಂಡದ ಮಾಜಿ ನಾಯಕ ಚೆನ್ನೈನಲ್ಲಿ ನಡೆದ ತರಬೇತಿ ವೇಳೆ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಗುರುವಾರ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸದಲ್ಲಿ ಅವರು ಪಾಲ್ಗೊಳ್ಳಲಿಲ್ಲ.
ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಅವರನ್ನು ಈ ಬಗ್ಗೆ ಕೇಳಿದಾಗ, ‘ನನ್ನ ಮಟ್ಟಿಗೆ, ಧೋನಿ ಆಡುವುದು ಶೇ 100 ರಷ್ಟು ಖಚಿತ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ’ ಎಂದು ಹೇಳಿದರು.
ಒಂದು ವೇಳೆ ಧೋನಿ ಆಡದಿದ್ದಲ್ಲಿ, ಡೆವೊನ್ ಕಾನ್ವೇ ಅಥವಾ ಅಂಬಟಿ ರಾಯುಡು ಅವರಲ್ಲಿ ಒಬ್ಬರು ವಿಕೆಟ್ ಕೀಪರ್ ಆಗಬಹುದು.
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…