BREAKING NEWS

IPL Retention 2024: ಸನ್‌ರೈಸರ್ಸ್ ಉಳಿಸಿಕೊಂಡ, ಕೈಬಿಟ್ಟ ಆಟಗಾರರ ಸಂಪೂರ್ಣ ಪಟ್ಟಿ

ಮುಂದಿನ ಮಾರ್ಚ್‌ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್‌ 26 ) ಸಂಜೆ 4 ಗಂಟೆಯೇ ಡೆಡ್‌ಲೈನ್‌ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್‌ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್‌ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಸನ್‌ರೈಸರ್ಸ್‌ ಹೈದರಾಬಾದ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್‌ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು: ಅಬ್ದುಲ್‌ ಸಮದ್‌, ಏಡನ್‌ ಮಾರ್ಕ್ರಮ್‌ ( ನಾಯಕ ), ರಾಹುಲ್‌ ತ್ರಿಪಾಠಿ, ಗ್ಲೆನ್‌ ಫಿಲಿಪ್ಸ್‌, ಹೆನ್ರಿಚ್‌ ಕ್ಲಾಸೀನ್‌, ಮಯಾಂಕ್‌ ಅಗರ್ವಾಲ್‌, ಅನ್ಮೋಲ್‌ಪ್ರೀತ್‌ ಸಿಂಗ್‌, ಉಪೇಂದ್ರ ಸಿಂಗ್‌ ಯಾದವ್‌, ನಿತಿಶ್‌ ಕುಮಾರ್‌ ರೆಡ್ಡಿ, ಅಭಿಷೇಕ್‌ ಶರ್ಮಾ, ಮಾರ್ಕೊ ಯಾನ್‌ಸೆನ್‌, ವಾಷಿಂಗ್‌ಟನ್‌ ಸುಂದರ್‌, ಸನ್ವಿರ್‌ ಸಿಂಗ್‌, ಭುವನೇಶ್ವರ್‌ ಕುಮಾರ್‌, ಟಿ ನಟರಾಜನ್‌, ಮಯಾಂಕ್‌ ಮಾರ್ಕಂಡೆ, ಉಮ್ರಾನ್‌ ಮಲಿಕ್‌, ಫಜಲ್‌ಹಕ್‌ ಫರೂಕಿ ಹಾಗೂ ಶಹಬಾಜ್‌ ಅಹ್ಮದ್.‌ ( ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಮಯಾಂಕ್‌ ದಾಗರ್‌ ಅವರನ್ನು ನೀಡಿ ಶಹಬಾಜ್‌ ಅಹ್ಮದ್‌ ಅವರನ್ನು ವಿನಿಮಯ ಮಾಡಿಕೊಳ್ಳಲಾಗಿದೆ )

ಬಿಡುಗಡೆಗೊಂಡ ಆಟಗಾರರು: ಹ್ಯಾರಿ ಬ್ರೂಕ್‌, ಸಮರ್ಥ್‌ ವ್ಯಾಸ್‌, ಕಾರ್ತಿಕ್‌ ತ್ಯಾಗಿ, ವಿವ್ರಂತ್‌ ಶರ್ಮಾ, ಅಕಿಲ್‌ ಹೊಸೈನ್‌ ಹಾಗೂ ಆದಿಲ್‌ ರಶೀದ್‌.

andolana

Recent Posts

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

39 mins ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

1 hour ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

6 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

6 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

6 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

7 hours ago