ಮುಂದಿನ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್ 26 ) ಸಂಜೆ 4 ಗಂಟೆಯೇ ಡೆಡ್ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು: ರೋಹಿತ್ ಶರ್ಮಾ ( ನಾಯಕ ), ಡಿವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್ ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಕೆಮರೂನ್ ಗ್ರೀನ್, ಶಾಮ್ಸ್ ಮುಲಾನಿ, ನೆಹಲಾ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಟೇರಿಯಾ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆನ್ಡಾರ್ಫ್ ಹಾಗೂ ರೊಮಾರಿಯೊ ಶೆಫರ್ಡ್.
( ರೊಮಾರಿಯೊ ಶೆಫರ್ಡ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ವಿನಿಮಯ ಮಾಡಿಕೊಳ್ಳಲಾಗಿದೆ )
ಬಿಡುಗಡೆಗೊಂಡ ಆಟಗಾರರು: ಮೊಹಮ್ಮದ್ ಅರ್ಷದ್ ಖಾನ್, ರಮಣ್ದೀಪ್ ಸಿಂಗ್, ಹೃತಿಕ್ ಶೋಕಿನ್, ರಾಘವ್ ಘೋಯಲ್, ಜೋಫ್ರಾ ಆರ್ಚರ್, ಟ್ರಿಸ್ಟನ್ ಸ್ಟಬ್ಸ್, ಡ್ಯೂನ್ ಯಾನ್ಸೆನ್, ಜೇ ರಿಚರ್ಡ್ಸನ್, ರಿಲೆ ಮೆರೆಡಿತ್, ಕ್ರಿಸ್ ಜೋರ್ಡನ್ ಹಾಗೂ ಸಂದೀಪ್ ವಾರಿಯರ್.
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…