BREAKING NEWS

IPL Retention 2024: 11 ಆಟಗಾರರನ್ನು ಕೈಬಿಟ್ಟ ಮುಂಬೈ; ಅರ್ಜುನ್‌ ತೆಂಡೂಲ್ಕರ್‌ ರಿಟೈನ್‌ ಆದ್ರಾ, ಇಲ್ವಾ?

ಮುಂದಿನ ಮಾರ್ಚ್‌ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್‌ 26 ) ಸಂಜೆ 4 ಗಂಟೆಯೇ ಡೆಡ್‌ಲೈನ್‌ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್‌ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್‌ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್‌ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು: ರೋಹಿತ್‌ ಶರ್ಮಾ ( ನಾಯಕ ), ಡಿವಾಲ್ಡ್‌ ಬ್ರೆವಿಸ್‌, ಸೂರ್ಯಕುಮಾರ್ ಯಾದವ್‌, ಇಶಾನ್‌ ಕಿಶನ್‌, ಎನ್‌ ತಿಲಕ್ ವರ್ಮಾ, ಟಿಮ್‌ ಡೇವಿಡ್‌, ವಿಷ್ಣು ವಿನೋದ್‌, ಅರ್ಜುನ್‌ ತೆಂಡೂಲ್ಕರ್‌, ಕೆಮರೂನ್‌ ಗ್ರೀನ್‌, ಶಾಮ್ಸ್‌ ಮುಲಾನಿ, ನೆಹಲಾ ವಧೇರಾ, ಜಸ್ಪ್ರೀತ್‌ ಬುಮ್ರಾ, ಕುಮಾರ್‌ ಕಟೇರಿಯಾ, ಪಿಯೂಷ್‌ ಚಾವ್ಲಾ, ಆಕಾಶ್‌ ಮಧ್ವಲ್‌, ಜೇಸನ್‌ ಬೆಹ್ರೆನ್‌ಡಾರ್ಫ್‌ ಹಾಗೂ ರೊಮಾರಿಯೊ ಶೆಫರ್ಡ್‌.
( ರೊಮಾರಿಯೊ ಶೆಫರ್ಡ್‌ ಅವರನ್ನು ಲಕ್ನೋ ಸೂಪರ್‌ ಜೈಂಟ್ಸ್‌ ತಂಡದಿಂದ ವಿನಿಮಯ ಮಾಡಿಕೊಳ್ಳಲಾಗಿದೆ )

ಬಿಡುಗಡೆಗೊಂಡ ಆಟಗಾರರು: ಮೊಹಮ್ಮದ್‌ ಅರ್ಷದ್‌ ಖಾನ್‌, ರಮಣ್‌ದೀಪ್‌ ಸಿಂಗ್‌, ಹೃತಿಕ್‌ ಶೋಕಿನ್‌, ರಾಘವ್‌ ಘೋಯಲ್‌, ಜೋಫ್ರಾ ಆರ್ಚರ್‌, ಟ್ರಿಸ್ಟನ್‌ ಸ್ಟಬ್ಸ್‌, ಡ್ಯೂನ್‌ ಯಾನ್ಸೆನ್‌, ಜೇ ರಿಚರ್ಡ್ಸನ್‌, ರಿಲೆ ಮೆರೆಡಿತ್‌, ಕ್ರಿಸ್‌ ಜೋರ್ಡನ್‌ ಹಾಗೂ ಸಂದೀಪ್‌ ವಾರಿಯರ್.‌

 

andolana

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

7 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

8 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

8 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

8 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

9 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

9 hours ago