ಮುಂದಿನ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್ 26 ) ಸಂಜೆ 4 ಗಂಟೆಯೇ ಡೆಡ್ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು: ರೋಹಿತ್ ಶರ್ಮಾ ( ನಾಯಕ ), ಡಿವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್ ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಕೆಮರೂನ್ ಗ್ರೀನ್, ಶಾಮ್ಸ್ ಮುಲಾನಿ, ನೆಹಲಾ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಟೇರಿಯಾ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆನ್ಡಾರ್ಫ್ ಹಾಗೂ ರೊಮಾರಿಯೊ ಶೆಫರ್ಡ್.
( ರೊಮಾರಿಯೊ ಶೆಫರ್ಡ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ವಿನಿಮಯ ಮಾಡಿಕೊಳ್ಳಲಾಗಿದೆ )
ಬಿಡುಗಡೆಗೊಂಡ ಆಟಗಾರರು: ಮೊಹಮ್ಮದ್ ಅರ್ಷದ್ ಖಾನ್, ರಮಣ್ದೀಪ್ ಸಿಂಗ್, ಹೃತಿಕ್ ಶೋಕಿನ್, ರಾಘವ್ ಘೋಯಲ್, ಜೋಫ್ರಾ ಆರ್ಚರ್, ಟ್ರಿಸ್ಟನ್ ಸ್ಟಬ್ಸ್, ಡ್ಯೂನ್ ಯಾನ್ಸೆನ್, ಜೇ ರಿಚರ್ಡ್ಸನ್, ರಿಲೆ ಮೆರೆಡಿತ್, ಕ್ರಿಸ್ ಜೋರ್ಡನ್ ಹಾಗೂ ಸಂದೀಪ್ ವಾರಿಯರ್.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…