BREAKING NEWS

IPL Retention 2024: ಹಸರಂಗ, ಪಟೇಲ್‌ ಸೇರಿ 11 ಆಟಗಾರರನ್ನು ಕೈಬಿಟ್ಟ ಆರ್‌ಸಿಬಿ!

ಮುಂದಿನ ಮಾರ್ಚ್‌ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್‌ 26 ) ಸಂಜೆ 4 ಗಂಟೆಯೇ ಡೆಡ್‌ಲೈನ್‌ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್‌ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್‌ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್‌ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು: ಫಾಫ್‌ ಡು ಪ್ಲೆಸಿಸ್‌ ( ನಾಯಕ ), ವಿರಾಟ್‌ ಕೊಹ್ಲಿ, ಗ್ಲೆನ್‌ ಮ್ಯಾಕ್ಸ್‌ವೆಲ್‌, ರಜತ್‌ ಪಟಿದಾರ್‌, ಅನುಜ್‌ ರಾವತ್‌, ದಿನೇಶ್‌ ಕಾರ್ತಿಕ್‌, ಸುಯಶ್‌ ಪ್ರಭುದೇಸಾಯಿ, ವಿಲ್‌ ಜಾಕ್ಸ್‌, ಮಹಿಪಾಲ್‌ ಲೊಮ್ರರ್‌, ಕರಣ್‌ ಶರ್ಮಾ, ಮನೋಜ್‌ ಬಂಡಂಗೆ, ವೈಶಖ್‌ ವಿಜಯ್‌ ಕುಮಾರ್‌, ಆಕಾಶ್‌ ದೀಪ್‌, ಮೊಹಮ್ಮದ್‌ ಸಿರಾಜ್‌, ರೀಸಿ ಟೊಪ್ಲಿ, ಹಿಮಾನ್ಶು ಶರ್ಮಾ, ರಜನ್‌ ಕುಮಾರ್‌ ಹಾಗೂ ಮಯಾಂಕ್‌ ದಾಗರ್‌. ( ಮಯಾಂಕ್‌ ದಾಗರ್‌ ಅವರನ್ನು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದಿಂದ ಶಹಬಾಜ್‌ ಅಹ್ಮದ್‌ ಬದಲಾಗಿ ವಿನಿಮಯ ಮಾಡಿಕೊಳ್ಳಲಾಗಿದೆ )

ಬಿಡುಗಡೆಗೊಂಡ ಆಟಗಾರರು: ವನಿಂದು ಹಸರಂಗ, ಹರ್ಷಲ್‌ ಪಟೇಲ್‌, ಜೋಶ್‌ ಹೇಜಲ್‌ವುಡ್‌, ಫಿನ್‌ ಅಲೆನ್‌, ಮೈಖೆಲ್‌ ಬ್ರೇಸ್‌ವೆಲ್‌, ಡೇವಿಡ್‌ ವಿಲ್ಲಿ, ವೇಯ್ನ್‌ ಪಾರ್ನೆಲ್‌, ಸೋನು ಯಾದವ್, ಅವಿನಾಶ್‌ ಸಿಂಗ್‌, ಸಿದ್ಧಾರ್ಥ್‌ ಕೌಲ್‌ ಹಾಗೂ ಕೇದಾರ್‌ ಜಾಧವ್.‌

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago