BREAKING NEWS

10 ಬಾರಿ ಮೌಂಟ್ ಎವರೆಸ್ಟ್ ಏರಿದ್ದ ಐರ್ಲೆಂಡ್‌ನ ನೊಯೇಲ್ ಹನ್ನಾ ಇನ್ನಿಲ್ಲ

ಕಠ್ಮಂಡು: ಜಗತ್ತಿನಲ್ಲೇ ಅತಿ ಎತ್ತರವಾದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 10 ಬಾರಿ ಯಶಸ್ವಿಯಾಗಿ ಏರಿ ಬಂದಿದ್ದ ಹಾಗೂ ಐರ್ಲೆಂಡ್‌ನ ಹೆಸರಾಂತ ಪರ್ವತಾರೋಹಿ 56 ವರ್ಷದ ನೊಯೇಲ್ ಹನ್ನಾ ಮೃತರಾಗಿದ್ದಾರೆ.

ಅವರು ನೇಪಾಳದ ಅನ್ನಪೂರ್ಣ ಪರ್ವತ ಪ್ರದೇಶದಲ್ಲಿ ಪರ್ವತಾರೋಹಣ ಮಾಡಿ ವಾಪಸ್ ಬರುವಾಗ ಟೆಂಟ್‌ನಲ್ಲಿ ಆಕ್ಸಿಜನ್ ಕೊರತೆಯಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಅವರ ಮೃತದೇಹವನ್ನು ಕೆಳಗೆ ತರಲಾಗುತ್ತಿದ್ದು ಅಲ್ಲಿಂದ ಕಠ್ಮಂಡುವಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಕಿಂಗ್‌ನ ಮಿಂಗ್ಮಾ ಶೆರ್ಫಾ ತಿಳಿಸಿದ್ದಾರೆ.

ನೊಯೇಲ್ ಅವರು ಸಾಯುವ ಮುನ್ನ 8,091 ಮೀಟರ್ ಎತ್ತರವಿರುವ ಅನ್ನಪೂರ್ಣ ಪರ್ವತವನ್ನು (ಮೌಂಟ್ ಎವರೆಸ್ಟ್ 8,849) ಯಶಸ್ವಿಯಾಗಿ ಏರಿದ್ದರು.

2006 ರಿಂದ 2020ರವರೆಗೆ ವಿವಿಧ ಸಂದರ್ಭಗಳಲ್ಲಿ ನೊಯೇಲ್ ಒಟ್ಟು 10 ಬಾರಿ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ್ದರು. ಈ ಮೂಲಕ ಅವರು ಪ್ರಪಂಚದ ಟಾಪ್ 10 ಪರ್ವತಾರೋಹಿಗಳ ಸಾಲಿನಲ್ಲಿ ಹೆಸರು ಪಡೆದಿದ್ದರು.

ಇದೇ ವೇಳೆ ನೊಯೇಲ್ ಅವರ ಜೊತೆ ಅನ್ನಪೂರ್ಣ ಪರ್ವತ ಏರಲು ಹೋಗಿದ್ದ ಭಲಜೀತ್ ಕೌರ್ ಹಾಗೂ ಅರ್ಜುನ್ ವಾಜಪೇಯಿ ಅವರನ್ನು ಅಪಾಯದಿಂದ ರಕ್ಷಿಸಲಾಗಿದೆ. ಕಳೆದ ವಾರ ಇಲ್ಲಿಯೇ ಹಿಮಗಾಳಿಯಿಂದ ನೇಪಾಳದ ಮೂವರು ಪರ್ವತಾರೋಹಿಗಳು ಮೃತಪಟ್ಟಿದ್ದರು.

ಅತ್ಯಂತ ಅಪಾಯಕಾರಿಯಾಗಿರುವ ಅನ್ನಪೂರ್ಣ ಪರ್ವತಪ್ರದೇಶದಲ್ಲಿ ಜಗತ್ತಿನಲ್ಲಿಯೇ ಅತಿ ಹೆಚ್ಚು ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

8 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

11 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

13 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

13 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

13 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

14 hours ago