ಕಠ್ಮಂಡು: ಜಗತ್ತಿನಲ್ಲೇ ಅತಿ ಎತ್ತರವಾದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 10 ಬಾರಿ ಯಶಸ್ವಿಯಾಗಿ ಏರಿ ಬಂದಿದ್ದ ಹಾಗೂ ಐರ್ಲೆಂಡ್ನ ಹೆಸರಾಂತ ಪರ್ವತಾರೋಹಿ 56 ವರ್ಷದ ನೊಯೇಲ್ ಹನ್ನಾ ಮೃತರಾಗಿದ್ದಾರೆ.
ಅವರು ನೇಪಾಳದ ಅನ್ನಪೂರ್ಣ ಪರ್ವತ ಪ್ರದೇಶದಲ್ಲಿ ಪರ್ವತಾರೋಹಣ ಮಾಡಿ ವಾಪಸ್ ಬರುವಾಗ ಟೆಂಟ್ನಲ್ಲಿ ಆಕ್ಸಿಜನ್ ಕೊರತೆಯಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ಅವರ ಮೃತದೇಹವನ್ನು ಕೆಳಗೆ ತರಲಾಗುತ್ತಿದ್ದು ಅಲ್ಲಿಂದ ಕಠ್ಮಂಡುವಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಕಿಂಗ್ನ ಮಿಂಗ್ಮಾ ಶೆರ್ಫಾ ತಿಳಿಸಿದ್ದಾರೆ.
ನೊಯೇಲ್ ಅವರು ಸಾಯುವ ಮುನ್ನ 8,091 ಮೀಟರ್ ಎತ್ತರವಿರುವ ಅನ್ನಪೂರ್ಣ ಪರ್ವತವನ್ನು (ಮೌಂಟ್ ಎವರೆಸ್ಟ್ 8,849) ಯಶಸ್ವಿಯಾಗಿ ಏರಿದ್ದರು.
2006 ರಿಂದ 2020ರವರೆಗೆ ವಿವಿಧ ಸಂದರ್ಭಗಳಲ್ಲಿ ನೊಯೇಲ್ ಒಟ್ಟು 10 ಬಾರಿ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ್ದರು. ಈ ಮೂಲಕ ಅವರು ಪ್ರಪಂಚದ ಟಾಪ್ 10 ಪರ್ವತಾರೋಹಿಗಳ ಸಾಲಿನಲ್ಲಿ ಹೆಸರು ಪಡೆದಿದ್ದರು.
ಇದೇ ವೇಳೆ ನೊಯೇಲ್ ಅವರ ಜೊತೆ ಅನ್ನಪೂರ್ಣ ಪರ್ವತ ಏರಲು ಹೋಗಿದ್ದ ಭಲಜೀತ್ ಕೌರ್ ಹಾಗೂ ಅರ್ಜುನ್ ವಾಜಪೇಯಿ ಅವರನ್ನು ಅಪಾಯದಿಂದ ರಕ್ಷಿಸಲಾಗಿದೆ. ಕಳೆದ ವಾರ ಇಲ್ಲಿಯೇ ಹಿಮಗಾಳಿಯಿಂದ ನೇಪಾಳದ ಮೂವರು ಪರ್ವತಾರೋಹಿಗಳು ಮೃತಪಟ್ಟಿದ್ದರು.
ಅತ್ಯಂತ ಅಪಾಯಕಾರಿಯಾಗಿರುವ ಅನ್ನಪೂರ್ಣ ಪರ್ವತಪ್ರದೇಶದಲ್ಲಿ ಜಗತ್ತಿನಲ್ಲಿಯೇ ಅತಿ ಹೆಚ್ಚು ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…