BREAKING NEWS

10 ಬಾರಿ ಮೌಂಟ್ ಎವರೆಸ್ಟ್ ಏರಿದ್ದ ಐರ್ಲೆಂಡ್‌ನ ನೊಯೇಲ್ ಹನ್ನಾ ಇನ್ನಿಲ್ಲ

ಕಠ್ಮಂಡು: ಜಗತ್ತಿನಲ್ಲೇ ಅತಿ ಎತ್ತರವಾದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 10 ಬಾರಿ ಯಶಸ್ವಿಯಾಗಿ ಏರಿ ಬಂದಿದ್ದ ಹಾಗೂ ಐರ್ಲೆಂಡ್‌ನ ಹೆಸರಾಂತ ಪರ್ವತಾರೋಹಿ 56 ವರ್ಷದ ನೊಯೇಲ್ ಹನ್ನಾ ಮೃತರಾಗಿದ್ದಾರೆ.

ಅವರು ನೇಪಾಳದ ಅನ್ನಪೂರ್ಣ ಪರ್ವತ ಪ್ರದೇಶದಲ್ಲಿ ಪರ್ವತಾರೋಹಣ ಮಾಡಿ ವಾಪಸ್ ಬರುವಾಗ ಟೆಂಟ್‌ನಲ್ಲಿ ಆಕ್ಸಿಜನ್ ಕೊರತೆಯಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಅವರ ಮೃತದೇಹವನ್ನು ಕೆಳಗೆ ತರಲಾಗುತ್ತಿದ್ದು ಅಲ್ಲಿಂದ ಕಠ್ಮಂಡುವಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಕಿಂಗ್‌ನ ಮಿಂಗ್ಮಾ ಶೆರ್ಫಾ ತಿಳಿಸಿದ್ದಾರೆ.

ನೊಯೇಲ್ ಅವರು ಸಾಯುವ ಮುನ್ನ 8,091 ಮೀಟರ್ ಎತ್ತರವಿರುವ ಅನ್ನಪೂರ್ಣ ಪರ್ವತವನ್ನು (ಮೌಂಟ್ ಎವರೆಸ್ಟ್ 8,849) ಯಶಸ್ವಿಯಾಗಿ ಏರಿದ್ದರು.

2006 ರಿಂದ 2020ರವರೆಗೆ ವಿವಿಧ ಸಂದರ್ಭಗಳಲ್ಲಿ ನೊಯೇಲ್ ಒಟ್ಟು 10 ಬಾರಿ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ್ದರು. ಈ ಮೂಲಕ ಅವರು ಪ್ರಪಂಚದ ಟಾಪ್ 10 ಪರ್ವತಾರೋಹಿಗಳ ಸಾಲಿನಲ್ಲಿ ಹೆಸರು ಪಡೆದಿದ್ದರು.

ಇದೇ ವೇಳೆ ನೊಯೇಲ್ ಅವರ ಜೊತೆ ಅನ್ನಪೂರ್ಣ ಪರ್ವತ ಏರಲು ಹೋಗಿದ್ದ ಭಲಜೀತ್ ಕೌರ್ ಹಾಗೂ ಅರ್ಜುನ್ ವಾಜಪೇಯಿ ಅವರನ್ನು ಅಪಾಯದಿಂದ ರಕ್ಷಿಸಲಾಗಿದೆ. ಕಳೆದ ವಾರ ಇಲ್ಲಿಯೇ ಹಿಮಗಾಳಿಯಿಂದ ನೇಪಾಳದ ಮೂವರು ಪರ್ವತಾರೋಹಿಗಳು ಮೃತಪಟ್ಟಿದ್ದರು.

ಅತ್ಯಂತ ಅಪಾಯಕಾರಿಯಾಗಿರುವ ಅನ್ನಪೂರ್ಣ ಪರ್ವತಪ್ರದೇಶದಲ್ಲಿ ಜಗತ್ತಿನಲ್ಲಿಯೇ ಅತಿ ಹೆಚ್ಚು ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

9 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

9 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

11 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

11 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

11 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

11 hours ago