BREAKING NEWS

10 ಬಾರಿ ಮೌಂಟ್ ಎವರೆಸ್ಟ್ ಏರಿದ್ದ ಐರ್ಲೆಂಡ್‌ನ ನೊಯೇಲ್ ಹನ್ನಾ ಇನ್ನಿಲ್ಲ

ಕಠ್ಮಂಡು: ಜಗತ್ತಿನಲ್ಲೇ ಅತಿ ಎತ್ತರವಾದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 10 ಬಾರಿ ಯಶಸ್ವಿಯಾಗಿ ಏರಿ ಬಂದಿದ್ದ ಹಾಗೂ ಐರ್ಲೆಂಡ್‌ನ ಹೆಸರಾಂತ ಪರ್ವತಾರೋಹಿ 56 ವರ್ಷದ ನೊಯೇಲ್ ಹನ್ನಾ ಮೃತರಾಗಿದ್ದಾರೆ.

ಅವರು ನೇಪಾಳದ ಅನ್ನಪೂರ್ಣ ಪರ್ವತ ಪ್ರದೇಶದಲ್ಲಿ ಪರ್ವತಾರೋಹಣ ಮಾಡಿ ವಾಪಸ್ ಬರುವಾಗ ಟೆಂಟ್‌ನಲ್ಲಿ ಆಕ್ಸಿಜನ್ ಕೊರತೆಯಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಅವರ ಮೃತದೇಹವನ್ನು ಕೆಳಗೆ ತರಲಾಗುತ್ತಿದ್ದು ಅಲ್ಲಿಂದ ಕಠ್ಮಂಡುವಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಕಿಂಗ್‌ನ ಮಿಂಗ್ಮಾ ಶೆರ್ಫಾ ತಿಳಿಸಿದ್ದಾರೆ.

ನೊಯೇಲ್ ಅವರು ಸಾಯುವ ಮುನ್ನ 8,091 ಮೀಟರ್ ಎತ್ತರವಿರುವ ಅನ್ನಪೂರ್ಣ ಪರ್ವತವನ್ನು (ಮೌಂಟ್ ಎವರೆಸ್ಟ್ 8,849) ಯಶಸ್ವಿಯಾಗಿ ಏರಿದ್ದರು.

2006 ರಿಂದ 2020ರವರೆಗೆ ವಿವಿಧ ಸಂದರ್ಭಗಳಲ್ಲಿ ನೊಯೇಲ್ ಒಟ್ಟು 10 ಬಾರಿ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ್ದರು. ಈ ಮೂಲಕ ಅವರು ಪ್ರಪಂಚದ ಟಾಪ್ 10 ಪರ್ವತಾರೋಹಿಗಳ ಸಾಲಿನಲ್ಲಿ ಹೆಸರು ಪಡೆದಿದ್ದರು.

ಇದೇ ವೇಳೆ ನೊಯೇಲ್ ಅವರ ಜೊತೆ ಅನ್ನಪೂರ್ಣ ಪರ್ವತ ಏರಲು ಹೋಗಿದ್ದ ಭಲಜೀತ್ ಕೌರ್ ಹಾಗೂ ಅರ್ಜುನ್ ವಾಜಪೇಯಿ ಅವರನ್ನು ಅಪಾಯದಿಂದ ರಕ್ಷಿಸಲಾಗಿದೆ. ಕಳೆದ ವಾರ ಇಲ್ಲಿಯೇ ಹಿಮಗಾಳಿಯಿಂದ ನೇಪಾಳದ ಮೂವರು ಪರ್ವತಾರೋಹಿಗಳು ಮೃತಪಟ್ಟಿದ್ದರು.

ಅತ್ಯಂತ ಅಪಾಯಕಾರಿಯಾಗಿರುವ ಅನ್ನಪೂರ್ಣ ಪರ್ವತಪ್ರದೇಶದಲ್ಲಿ ಜಗತ್ತಿನಲ್ಲಿಯೇ ಅತಿ ಹೆಚ್ಚು ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago