BREAKING NEWS

10 ಬಾರಿ ಮೌಂಟ್ ಎವರೆಸ್ಟ್ ಏರಿದ್ದ ಐರ್ಲೆಂಡ್‌ನ ನೊಯೇಲ್ ಹನ್ನಾ ಇನ್ನಿಲ್ಲ

ಕಠ್ಮಂಡು: ಜಗತ್ತಿನಲ್ಲೇ ಅತಿ ಎತ್ತರವಾದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 10 ಬಾರಿ ಯಶಸ್ವಿಯಾಗಿ ಏರಿ ಬಂದಿದ್ದ ಹಾಗೂ ಐರ್ಲೆಂಡ್‌ನ ಹೆಸರಾಂತ ಪರ್ವತಾರೋಹಿ 56 ವರ್ಷದ ನೊಯೇಲ್ ಹನ್ನಾ ಮೃತರಾಗಿದ್ದಾರೆ.

ಅವರು ನೇಪಾಳದ ಅನ್ನಪೂರ್ಣ ಪರ್ವತ ಪ್ರದೇಶದಲ್ಲಿ ಪರ್ವತಾರೋಹಣ ಮಾಡಿ ವಾಪಸ್ ಬರುವಾಗ ಟೆಂಟ್‌ನಲ್ಲಿ ಆಕ್ಸಿಜನ್ ಕೊರತೆಯಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಅವರ ಮೃತದೇಹವನ್ನು ಕೆಳಗೆ ತರಲಾಗುತ್ತಿದ್ದು ಅಲ್ಲಿಂದ ಕಠ್ಮಂಡುವಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಕಿಂಗ್‌ನ ಮಿಂಗ್ಮಾ ಶೆರ್ಫಾ ತಿಳಿಸಿದ್ದಾರೆ.

ನೊಯೇಲ್ ಅವರು ಸಾಯುವ ಮುನ್ನ 8,091 ಮೀಟರ್ ಎತ್ತರವಿರುವ ಅನ್ನಪೂರ್ಣ ಪರ್ವತವನ್ನು (ಮೌಂಟ್ ಎವರೆಸ್ಟ್ 8,849) ಯಶಸ್ವಿಯಾಗಿ ಏರಿದ್ದರು.

2006 ರಿಂದ 2020ರವರೆಗೆ ವಿವಿಧ ಸಂದರ್ಭಗಳಲ್ಲಿ ನೊಯೇಲ್ ಒಟ್ಟು 10 ಬಾರಿ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ್ದರು. ಈ ಮೂಲಕ ಅವರು ಪ್ರಪಂಚದ ಟಾಪ್ 10 ಪರ್ವತಾರೋಹಿಗಳ ಸಾಲಿನಲ್ಲಿ ಹೆಸರು ಪಡೆದಿದ್ದರು.

ಇದೇ ವೇಳೆ ನೊಯೇಲ್ ಅವರ ಜೊತೆ ಅನ್ನಪೂರ್ಣ ಪರ್ವತ ಏರಲು ಹೋಗಿದ್ದ ಭಲಜೀತ್ ಕೌರ್ ಹಾಗೂ ಅರ್ಜುನ್ ವಾಜಪೇಯಿ ಅವರನ್ನು ಅಪಾಯದಿಂದ ರಕ್ಷಿಸಲಾಗಿದೆ. ಕಳೆದ ವಾರ ಇಲ್ಲಿಯೇ ಹಿಮಗಾಳಿಯಿಂದ ನೇಪಾಳದ ಮೂವರು ಪರ್ವತಾರೋಹಿಗಳು ಮೃತಪಟ್ಟಿದ್ದರು.

ಅತ್ಯಂತ ಅಪಾಯಕಾರಿಯಾಗಿರುವ ಅನ್ನಪೂರ್ಣ ಪರ್ವತಪ್ರದೇಶದಲ್ಲಿ ಜಗತ್ತಿನಲ್ಲಿಯೇ ಅತಿ ಹೆಚ್ಚು ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago