ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಅಗುತ್ತಿದ್ದು, ಗುರಿ ತಪ್ಪಿ ಬಿದ್ದ ಗುಂಡೇಟಿನಿಂದಾಗಿ ಅರ್ಜುನ ಉಸಿರು ಚೆಲ್ಲಿದನಾ ? ಎಂಬ ಅನುಮಾನ ಹುಟ್ಟುಹಾಕಿದೆ.
ವೈರಲ್ ಆಗಿರುವ ಮಾವುತ ಹಾಗೂ ಸ್ಥಳೀಯರೊಬ್ಬರ ಸಂಭಾಷಣೆ ವಿಡಿಯೋದಲ್ಲಿ ಮದದಲ್ಲಿದ್ದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಮುಂದಾಗಿತ್ತು. ಈ ಕಾರ್ಯಾಚರಣೆಯ ವೇಳೆ ಒಂಟಿ ಸಲಗ ದಾಳಿ ಮಾಡಿತ್ತು ಇದರಿಂದ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಅಚಾನಕ್ಕಾಗಿ ಆ ಗುಂಡು ಅರ್ಜುನನ ಕಾಲಿಗೆ ತಗುಲಿದೆ. ಕಾರ್ಯಾಚರಣೆಯ ವೇಳೆ ಅರವಳಿಕೆ ಇಂಜೆಕ್ಷನ್ ನೀಡಲಾಯ್ತು, ಅದು ಗುರಿ ತಪ್ಪಿ ಪ್ರಶಾಂತ್ ಎಂಬ ಸಾಕಾನೆ ಮೇಲೆ ಬಿತ್ತು. ನಂತರ ಮತ್ತೊಂದು ಇಂಜೆಕ್ಷನ್ ನೀಡಿ ಅದನ್ನು ಸುಧಾರಿಸಲಾಯ್ತು. ನಂತರ ಅರ್ಜುನ ಕಾಡಾನೆ ಮೇಲೆ ದಾಳಿ ಮಾಡಿದ. ಕಾಡಾನೆ ಹಾಗೂ ಅರ್ಜುನನ ಕಾಳಗದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಾಳಿಯಲ್ಲಿ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತ್ತು. ಆಗ ಅರ್ಜುನ ಬಲ ಕಳೆದುಕೊಂಡ. ಆಗ ಅರ್ಜುನ ದೊಡ್ಡ ಆನೆಯಾದ್ದರಿಂದ ಸುತ್ತಮುತ್ತಲಿನ ಮರಗಳನ್ನು ಬೀಳಿಸಿದ, ನಾವು ಆನೆ ಮೇಲಿಂದ ಇಳಿದು ಓಡಿದೆವು. ಕಾಲಿಗೆ ಗುಂಡು ತಗುಲಿದ್ದರಿಂದ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ಮಾಡಿದೆ. ದಾಳಿಗೊಳಗಾದ ಅರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾತನಾಡಿದ್ದಾರೆ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…