BREAKING NEWS

ಅರಣ್ಯ ಇಲಾಖೆ ಸಿಬ್ಬಂದಿಯ ಪ್ರಮಾದಕ್ಕೆ ಬಲಿಯಾದ್ನಾ ಅರ್ಜುನ ?

ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಅಗುತ್ತಿದ್ದು, ಗುರಿ ತಪ್ಪಿ ಬಿದ್ದ ಗುಂಡೇಟಿನಿಂದಾಗಿ ಅರ್ಜುನ ಉಸಿರು ಚೆಲ್ಲಿದನಾ ? ಎಂಬ ಅನುಮಾನ ಹುಟ್ಟುಹಾಕಿದೆ.

ವೈರಲ್‌ ಆಗಿರುವ ಮಾವುತ ಹಾಗೂ ಸ್ಥಳೀಯರೊಬ್ಬರ ಸಂಭಾಷಣೆ ವಿಡಿಯೋದಲ್ಲಿ ಮದದಲ್ಲಿದ್ದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಮುಂದಾಗಿತ್ತು. ಈ ಕಾರ್ಯಾಚರಣೆಯ ವೇಳೆ ಒಂಟಿ ಸಲಗ ದಾಳಿ ಮಾಡಿತ್ತು ಇದರಿಂದ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಅಚಾನಕ್ಕಾಗಿ ಆ ಗುಂಡು ಅರ್ಜುನನ ಕಾಲಿಗೆ ತಗುಲಿದೆ. ಕಾರ್ಯಾಚರಣೆಯ ವೇಳೆ ಅರವಳಿಕೆ ಇಂಜೆಕ್ಷನ್‌ ನೀಡಲಾಯ್ತು, ಅದು ಗುರಿ ತಪ್ಪಿ ಪ್ರಶಾಂತ್‌ ಎಂಬ ಸಾಕಾನೆ ಮೇಲೆ ಬಿತ್ತು. ನಂತರ ಮತ್ತೊಂದು ಇಂಜೆಕ್ಷನ್‌ ನೀಡಿ ಅದನ್ನು ಸುಧಾರಿಸಲಾಯ್ತು. ನಂತರ ಅರ್ಜುನ ಕಾಡಾನೆ ಮೇಲೆ ದಾಳಿ ಮಾಡಿದ. ಕಾಡಾನೆ ಹಾಗೂ ಅರ್ಜುನನ ಕಾಳಗದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಾಳಿಯಲ್ಲಿ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತ್ತು. ಆಗ ಅರ್ಜುನ ಬಲ ಕಳೆದುಕೊಂಡ. ಆಗ ಅರ್ಜುನ ದೊಡ್ಡ ಆನೆಯಾದ್ದರಿಂದ ಸುತ್ತಮುತ್ತಲಿನ ಮರಗಳನ್ನು ಬೀಳಿಸಿದ, ನಾವು ಆನೆ ಮೇಲಿಂದ ಇಳಿದು ಓಡಿದೆವು. ಕಾಲಿಗೆ ಗುಂಡು ತಗುಲಿದ್ದರಿಂದ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ಮಾಡಿದೆ. ದಾಳಿಗೊಳಗಾದ ಅರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾತನಾಡಿದ್ದಾರೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago