BREAKING NEWS

ಅರಣ್ಯ ಇಲಾಖೆ ಸಿಬ್ಬಂದಿಯ ಪ್ರಮಾದಕ್ಕೆ ಬಲಿಯಾದ್ನಾ ಅರ್ಜುನ ?

ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಅಗುತ್ತಿದ್ದು, ಗುರಿ ತಪ್ಪಿ ಬಿದ್ದ ಗುಂಡೇಟಿನಿಂದಾಗಿ ಅರ್ಜುನ ಉಸಿರು ಚೆಲ್ಲಿದನಾ ? ಎಂಬ ಅನುಮಾನ ಹುಟ್ಟುಹಾಕಿದೆ.

ವೈರಲ್‌ ಆಗಿರುವ ಮಾವುತ ಹಾಗೂ ಸ್ಥಳೀಯರೊಬ್ಬರ ಸಂಭಾಷಣೆ ವಿಡಿಯೋದಲ್ಲಿ ಮದದಲ್ಲಿದ್ದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಮುಂದಾಗಿತ್ತು. ಈ ಕಾರ್ಯಾಚರಣೆಯ ವೇಳೆ ಒಂಟಿ ಸಲಗ ದಾಳಿ ಮಾಡಿತ್ತು ಇದರಿಂದ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಅಚಾನಕ್ಕಾಗಿ ಆ ಗುಂಡು ಅರ್ಜುನನ ಕಾಲಿಗೆ ತಗುಲಿದೆ. ಕಾರ್ಯಾಚರಣೆಯ ವೇಳೆ ಅರವಳಿಕೆ ಇಂಜೆಕ್ಷನ್‌ ನೀಡಲಾಯ್ತು, ಅದು ಗುರಿ ತಪ್ಪಿ ಪ್ರಶಾಂತ್‌ ಎಂಬ ಸಾಕಾನೆ ಮೇಲೆ ಬಿತ್ತು. ನಂತರ ಮತ್ತೊಂದು ಇಂಜೆಕ್ಷನ್‌ ನೀಡಿ ಅದನ್ನು ಸುಧಾರಿಸಲಾಯ್ತು. ನಂತರ ಅರ್ಜುನ ಕಾಡಾನೆ ಮೇಲೆ ದಾಳಿ ಮಾಡಿದ. ಕಾಡಾನೆ ಹಾಗೂ ಅರ್ಜುನನ ಕಾಳಗದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಾಳಿಯಲ್ಲಿ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತ್ತು. ಆಗ ಅರ್ಜುನ ಬಲ ಕಳೆದುಕೊಂಡ. ಆಗ ಅರ್ಜುನ ದೊಡ್ಡ ಆನೆಯಾದ್ದರಿಂದ ಸುತ್ತಮುತ್ತಲಿನ ಮರಗಳನ್ನು ಬೀಳಿಸಿದ, ನಾವು ಆನೆ ಮೇಲಿಂದ ಇಳಿದು ಓಡಿದೆವು. ಕಾಲಿಗೆ ಗುಂಡು ತಗುಲಿದ್ದರಿಂದ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ಮಾಡಿದೆ. ದಾಳಿಗೊಳಗಾದ ಅರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾತನಾಡಿದ್ದಾರೆ.

lokesh

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago