BREAKING NEWS

ಅರಣ್ಯ ಇಲಾಖೆ ಸಿಬ್ಬಂದಿಯ ಪ್ರಮಾದಕ್ಕೆ ಬಲಿಯಾದ್ನಾ ಅರ್ಜುನ ?

ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಅಗುತ್ತಿದ್ದು, ಗುರಿ ತಪ್ಪಿ ಬಿದ್ದ ಗುಂಡೇಟಿನಿಂದಾಗಿ ಅರ್ಜುನ ಉಸಿರು ಚೆಲ್ಲಿದನಾ ? ಎಂಬ ಅನುಮಾನ ಹುಟ್ಟುಹಾಕಿದೆ.

ವೈರಲ್‌ ಆಗಿರುವ ಮಾವುತ ಹಾಗೂ ಸ್ಥಳೀಯರೊಬ್ಬರ ಸಂಭಾಷಣೆ ವಿಡಿಯೋದಲ್ಲಿ ಮದದಲ್ಲಿದ್ದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಮುಂದಾಗಿತ್ತು. ಈ ಕಾರ್ಯಾಚರಣೆಯ ವೇಳೆ ಒಂಟಿ ಸಲಗ ದಾಳಿ ಮಾಡಿತ್ತು ಇದರಿಂದ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಅಚಾನಕ್ಕಾಗಿ ಆ ಗುಂಡು ಅರ್ಜುನನ ಕಾಲಿಗೆ ತಗುಲಿದೆ. ಕಾರ್ಯಾಚರಣೆಯ ವೇಳೆ ಅರವಳಿಕೆ ಇಂಜೆಕ್ಷನ್‌ ನೀಡಲಾಯ್ತು, ಅದು ಗುರಿ ತಪ್ಪಿ ಪ್ರಶಾಂತ್‌ ಎಂಬ ಸಾಕಾನೆ ಮೇಲೆ ಬಿತ್ತು. ನಂತರ ಮತ್ತೊಂದು ಇಂಜೆಕ್ಷನ್‌ ನೀಡಿ ಅದನ್ನು ಸುಧಾರಿಸಲಾಯ್ತು. ನಂತರ ಅರ್ಜುನ ಕಾಡಾನೆ ಮೇಲೆ ದಾಳಿ ಮಾಡಿದ. ಕಾಡಾನೆ ಹಾಗೂ ಅರ್ಜುನನ ಕಾಳಗದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಾಳಿಯಲ್ಲಿ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತ್ತು. ಆಗ ಅರ್ಜುನ ಬಲ ಕಳೆದುಕೊಂಡ. ಆಗ ಅರ್ಜುನ ದೊಡ್ಡ ಆನೆಯಾದ್ದರಿಂದ ಸುತ್ತಮುತ್ತಲಿನ ಮರಗಳನ್ನು ಬೀಳಿಸಿದ, ನಾವು ಆನೆ ಮೇಲಿಂದ ಇಳಿದು ಓಡಿದೆವು. ಕಾಲಿಗೆ ಗುಂಡು ತಗುಲಿದ್ದರಿಂದ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ಮಾಡಿದೆ. ದಾಳಿಗೊಳಗಾದ ಅರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾತನಾಡಿದ್ದಾರೆ.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

10 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

13 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

15 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

15 hours ago