BREAKING NEWS

ಡೆಡ್ಲಿ ಆಕ್ಸಿಡೆಂಟ್ ಸ್ಪಾಟ್ ಆಗುತ್ತಿದೆಯೇ ಬೆಂ-ಮೈ ದಶಪಥ ಹೆದ್ದಾರಿ ?

ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ.

ಬೆಂಗಳೂರು ಹಾಗೂ ಸುತ್ತಮುತ್ತ ಕೈಗಾರಿಕೆಗಳು ಹೆಚ್ಚಿವೆ. ಇದೇ ರೀತಿ ಮೈಸೂರು ನಗರವು ಅಭಿವೃದ್ಧಿಯಾಗಲಿದೆ. ಎರಡು ಪ್ರಮುಖ ನಗರಗಳ ಮಧ್ಯೆ ಪ್ರಯಾಣಿಕರ ಸುಗಮ ಮತ್ತು ಸುಲಭ ಕ್ಷಿಪ್ರ ಓಡಾಟಕ್ಕೆ ಅನುಕೂಲವಾಗಲೆಂದು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಮಾಡಲಾಗಿದೆ. ಒಟ್ಟು ಸುಮಾರು 9000 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣವಾಗಿದೆ. ಉದ್ಘಾಟನೆಗೊಂಡ ಬಳಿಕ ಕೇವಲ 5 ತಿಂಗಳಲ್ಲೇ ಇದುವರೆಗೆ ಹಲವು ಅಪಘಾತಗಳಲ್ಲಿ 50ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದು ಮಂಡ್ಯ ಹಾಗೂ ವಿವಿಧ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ.

ಆಗಾಗ ಸಂಭವಿಸುತ್ತಿರುವ ಅಪಘಾತಗಳಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಡ್ಯ ಜಿಲ್ಲೆಯೊಳಗೆ ಹಾದು ಹೋಗುತ್ತದೆ. ಜಿಲ್ಲೆ ವ್ಯಾಪ್ತಿಯಲ್ಲಿ ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಈ ಹೆದ್ದಾರಿಯ ಕಾಮಗಾರಿ ಪೂರ್ಣಗೊಂಡಿದ್ದು, ವೇಗದ ಈ ಪ್ರಯಾಣವು ಪ್ರಯಾಣದ ಸಮಯವನ್ನು ಉಳಿಸುತ್ತಿದೆ.

ಇದುವರೆಗಿನ ಅಪಘಾತಗಳ ಸಂಪೂರ್ಣ ಮಾಹಿತಿ : ಮಂಡ್ಯ ವ್ಯಾಪ್ತಿಯ ಈ ಹೆದ್ದಾರಿಯಲ್ಲಿ ನಡೆದ ಅಪಘಾತ ಪ್ರಕರಣ ಹಾಗೂ ಸಾವಿನ ವರದಿಗೆ ಮಂಡ್ಯ ಜನ ಕಳವಳ ವ್ಯಕ್ತಪಡಿಸಿದ್ದಾರೆ. ಜನವರಿ ತಿಂಗಳಿಂದ ಮೇ ತಿಂಗಳಾಂತ್ಯದವರೆಗೆ 570 ಅಪಘಾತ ಪ್ರಕರಣ ಸಂಭವಿಸಿವೆ. ಅದರಲ್ಲಿ 50ಕ್ಕೂ ಹೆಚ್ಚು ಮಂದಿಗೆ ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡರೆ, 180ಕ್ಕೂ ಅಧಿಕ ಮಂದಿ ಕೈಕಾಲು ಮುರಿದಕೊಂಡಿದ್ದಾರೆ. 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ. ಸಾವುಗಳು ಕೂಡ ಸಂಭವಿಸಿವೆ.

ಹೆದ್ದಾರಿಯು ಉಪಯೋಗವಿದ್ದರೂ ಸಹ ವೇಗದ ಚಾಲನೆಯಿಂದಾಗಿ ದುರಂತಗಳು ಸಂಭವಿಸುತ್ತಿವೆ. ಎಕ್ಸ್‌ಪ್ರೆಸ್ ವೇ ಸೇರಿದಂತೆ ಇಲ್ಲಿನ ಸರ್ವಿಸ್ ರಸ್ತೆಯಲ್ಲಿ ವೇಗವಾಗಿ ವಾಹನಗಳು ಸಂಚಾರ ನಡೆಸುತ್ತವೆ. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿಯು ಅವಘಡಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ. ಇದರೊಂದಿಗೆ ಮತ್ತೊಂದೆಡೆ ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿವೆ. ಅದು ಸಹ ಅವಘಡಗಳಿಗೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ರಸ್ತೆಗಳಲ್ಲಿ ಉಬ್ಬುಗಳಿಂದ ಹಾಗೂ ಇನ್ನಿತರ ಕಾರಣಗಳಿಂದ ವೇಗವಾಗಿ ಚಲಿಸುತ್ತಿರುವ ವಾಹನಗಳು ಒಮ್ಮೇಲೆ ನಿಯಂತ್ರಿಸಲಾಗದೇ ಅಪಘಾತ ಸಂಭವಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

lokesh

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

10 hours ago