ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ.
ಬೆಂಗಳೂರು ಹಾಗೂ ಸುತ್ತಮುತ್ತ ಕೈಗಾರಿಕೆಗಳು ಹೆಚ್ಚಿವೆ. ಇದೇ ರೀತಿ ಮೈಸೂರು ನಗರವು ಅಭಿವೃದ್ಧಿಯಾಗಲಿದೆ. ಎರಡು ಪ್ರಮುಖ ನಗರಗಳ ಮಧ್ಯೆ ಪ್ರಯಾಣಿಕರ ಸುಗಮ ಮತ್ತು ಸುಲಭ ಕ್ಷಿಪ್ರ ಓಡಾಟಕ್ಕೆ ಅನುಕೂಲವಾಗಲೆಂದು ಎಕ್ಸ್ಪ್ರೆಸ್ ವೇ ನಿರ್ಮಾಣ ಮಾಡಲಾಗಿದೆ. ಒಟ್ಟು ಸುಮಾರು 9000 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣವಾಗಿದೆ. ಉದ್ಘಾಟನೆಗೊಂಡ ಬಳಿಕ ಕೇವಲ 5 ತಿಂಗಳಲ್ಲೇ ಇದುವರೆಗೆ ಹಲವು ಅಪಘಾತಗಳಲ್ಲಿ 50ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದು ಮಂಡ್ಯ ಹಾಗೂ ವಿವಿಧ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ.
ಆಗಾಗ ಸಂಭವಿಸುತ್ತಿರುವ ಅಪಘಾತಗಳಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಡ್ಯ ಜಿಲ್ಲೆಯೊಳಗೆ ಹಾದು ಹೋಗುತ್ತದೆ. ಜಿಲ್ಲೆ ವ್ಯಾಪ್ತಿಯಲ್ಲಿ ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಈ ಹೆದ್ದಾರಿಯ ಕಾಮಗಾರಿ ಪೂರ್ಣಗೊಂಡಿದ್ದು, ವೇಗದ ಈ ಪ್ರಯಾಣವು ಪ್ರಯಾಣದ ಸಮಯವನ್ನು ಉಳಿಸುತ್ತಿದೆ.
ಇದುವರೆಗಿನ ಅಪಘಾತಗಳ ಸಂಪೂರ್ಣ ಮಾಹಿತಿ : ಮಂಡ್ಯ ವ್ಯಾಪ್ತಿಯ ಈ ಹೆದ್ದಾರಿಯಲ್ಲಿ ನಡೆದ ಅಪಘಾತ ಪ್ರಕರಣ ಹಾಗೂ ಸಾವಿನ ವರದಿಗೆ ಮಂಡ್ಯ ಜನ ಕಳವಳ ವ್ಯಕ್ತಪಡಿಸಿದ್ದಾರೆ. ಜನವರಿ ತಿಂಗಳಿಂದ ಮೇ ತಿಂಗಳಾಂತ್ಯದವರೆಗೆ 570 ಅಪಘಾತ ಪ್ರಕರಣ ಸಂಭವಿಸಿವೆ. ಅದರಲ್ಲಿ 50ಕ್ಕೂ ಹೆಚ್ಚು ಮಂದಿಗೆ ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡರೆ, 180ಕ್ಕೂ ಅಧಿಕ ಮಂದಿ ಕೈಕಾಲು ಮುರಿದಕೊಂಡಿದ್ದಾರೆ. 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ. ಸಾವುಗಳು ಕೂಡ ಸಂಭವಿಸಿವೆ.
ಹೆದ್ದಾರಿಯು ಉಪಯೋಗವಿದ್ದರೂ ಸಹ ವೇಗದ ಚಾಲನೆಯಿಂದಾಗಿ ದುರಂತಗಳು ಸಂಭವಿಸುತ್ತಿವೆ. ಎಕ್ಸ್ಪ್ರೆಸ್ ವೇ ಸೇರಿದಂತೆ ಇಲ್ಲಿನ ಸರ್ವಿಸ್ ರಸ್ತೆಯಲ್ಲಿ ವೇಗವಾಗಿ ವಾಹನಗಳು ಸಂಚಾರ ನಡೆಸುತ್ತವೆ. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿಯು ಅವಘಡಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ. ಇದರೊಂದಿಗೆ ಮತ್ತೊಂದೆಡೆ ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿವೆ. ಅದು ಸಹ ಅವಘಡಗಳಿಗೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ರಸ್ತೆಗಳಲ್ಲಿ ಉಬ್ಬುಗಳಿಂದ ಹಾಗೂ ಇನ್ನಿತರ ಕಾರಣಗಳಿಂದ ವೇಗವಾಗಿ ಚಲಿಸುತ್ತಿರುವ ವಾಹನಗಳು ಒಮ್ಮೇಲೆ ನಿಯಂತ್ರಿಸಲಾಗದೇ ಅಪಘಾತ ಸಂಭವಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…