BREAKING NEWS

ಡೆಡ್ಲಿ ಆಕ್ಸಿಡೆಂಟ್ ಸ್ಪಾಟ್ ಆಗುತ್ತಿದೆಯೇ ಬೆಂ-ಮೈ ದಶಪಥ ಹೆದ್ದಾರಿ ?

ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ.

ಬೆಂಗಳೂರು ಹಾಗೂ ಸುತ್ತಮುತ್ತ ಕೈಗಾರಿಕೆಗಳು ಹೆಚ್ಚಿವೆ. ಇದೇ ರೀತಿ ಮೈಸೂರು ನಗರವು ಅಭಿವೃದ್ಧಿಯಾಗಲಿದೆ. ಎರಡು ಪ್ರಮುಖ ನಗರಗಳ ಮಧ್ಯೆ ಪ್ರಯಾಣಿಕರ ಸುಗಮ ಮತ್ತು ಸುಲಭ ಕ್ಷಿಪ್ರ ಓಡಾಟಕ್ಕೆ ಅನುಕೂಲವಾಗಲೆಂದು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಮಾಡಲಾಗಿದೆ. ಒಟ್ಟು ಸುಮಾರು 9000 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣವಾಗಿದೆ. ಉದ್ಘಾಟನೆಗೊಂಡ ಬಳಿಕ ಕೇವಲ 5 ತಿಂಗಳಲ್ಲೇ ಇದುವರೆಗೆ ಹಲವು ಅಪಘಾತಗಳಲ್ಲಿ 50ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದು ಮಂಡ್ಯ ಹಾಗೂ ವಿವಿಧ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ.

ಆಗಾಗ ಸಂಭವಿಸುತ್ತಿರುವ ಅಪಘಾತಗಳಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಡ್ಯ ಜಿಲ್ಲೆಯೊಳಗೆ ಹಾದು ಹೋಗುತ್ತದೆ. ಜಿಲ್ಲೆ ವ್ಯಾಪ್ತಿಯಲ್ಲಿ ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಈ ಹೆದ್ದಾರಿಯ ಕಾಮಗಾರಿ ಪೂರ್ಣಗೊಂಡಿದ್ದು, ವೇಗದ ಈ ಪ್ರಯಾಣವು ಪ್ರಯಾಣದ ಸಮಯವನ್ನು ಉಳಿಸುತ್ತಿದೆ.

ಇದುವರೆಗಿನ ಅಪಘಾತಗಳ ಸಂಪೂರ್ಣ ಮಾಹಿತಿ : ಮಂಡ್ಯ ವ್ಯಾಪ್ತಿಯ ಈ ಹೆದ್ದಾರಿಯಲ್ಲಿ ನಡೆದ ಅಪಘಾತ ಪ್ರಕರಣ ಹಾಗೂ ಸಾವಿನ ವರದಿಗೆ ಮಂಡ್ಯ ಜನ ಕಳವಳ ವ್ಯಕ್ತಪಡಿಸಿದ್ದಾರೆ. ಜನವರಿ ತಿಂಗಳಿಂದ ಮೇ ತಿಂಗಳಾಂತ್ಯದವರೆಗೆ 570 ಅಪಘಾತ ಪ್ರಕರಣ ಸಂಭವಿಸಿವೆ. ಅದರಲ್ಲಿ 50ಕ್ಕೂ ಹೆಚ್ಚು ಮಂದಿಗೆ ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡರೆ, 180ಕ್ಕೂ ಅಧಿಕ ಮಂದಿ ಕೈಕಾಲು ಮುರಿದಕೊಂಡಿದ್ದಾರೆ. 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ. ಸಾವುಗಳು ಕೂಡ ಸಂಭವಿಸಿವೆ.

ಹೆದ್ದಾರಿಯು ಉಪಯೋಗವಿದ್ದರೂ ಸಹ ವೇಗದ ಚಾಲನೆಯಿಂದಾಗಿ ದುರಂತಗಳು ಸಂಭವಿಸುತ್ತಿವೆ. ಎಕ್ಸ್‌ಪ್ರೆಸ್ ವೇ ಸೇರಿದಂತೆ ಇಲ್ಲಿನ ಸರ್ವಿಸ್ ರಸ್ತೆಯಲ್ಲಿ ವೇಗವಾಗಿ ವಾಹನಗಳು ಸಂಚಾರ ನಡೆಸುತ್ತವೆ. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿಯು ಅವಘಡಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ. ಇದರೊಂದಿಗೆ ಮತ್ತೊಂದೆಡೆ ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿವೆ. ಅದು ಸಹ ಅವಘಡಗಳಿಗೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ರಸ್ತೆಗಳಲ್ಲಿ ಉಬ್ಬುಗಳಿಂದ ಹಾಗೂ ಇನ್ನಿತರ ಕಾರಣಗಳಿಂದ ವೇಗವಾಗಿ ಚಲಿಸುತ್ತಿರುವ ವಾಹನಗಳು ಒಮ್ಮೇಲೆ ನಿಯಂತ್ರಿಸಲಾಗದೇ ಅಪಘಾತ ಸಂಭವಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

lokesh

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

6 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

6 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

7 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

7 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

8 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

8 hours ago