BREAKING NEWS

ಡೆಡ್ಲಿ ಆಕ್ಸಿಡೆಂಟ್ ಸ್ಪಾಟ್ ಆಗುತ್ತಿದೆಯೇ ಬೆಂ-ಮೈ ದಶಪಥ ಹೆದ್ದಾರಿ ?

ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ.

ಬೆಂಗಳೂರು ಹಾಗೂ ಸುತ್ತಮುತ್ತ ಕೈಗಾರಿಕೆಗಳು ಹೆಚ್ಚಿವೆ. ಇದೇ ರೀತಿ ಮೈಸೂರು ನಗರವು ಅಭಿವೃದ್ಧಿಯಾಗಲಿದೆ. ಎರಡು ಪ್ರಮುಖ ನಗರಗಳ ಮಧ್ಯೆ ಪ್ರಯಾಣಿಕರ ಸುಗಮ ಮತ್ತು ಸುಲಭ ಕ್ಷಿಪ್ರ ಓಡಾಟಕ್ಕೆ ಅನುಕೂಲವಾಗಲೆಂದು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಮಾಡಲಾಗಿದೆ. ಒಟ್ಟು ಸುಮಾರು 9000 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣವಾಗಿದೆ. ಉದ್ಘಾಟನೆಗೊಂಡ ಬಳಿಕ ಕೇವಲ 5 ತಿಂಗಳಲ್ಲೇ ಇದುವರೆಗೆ ಹಲವು ಅಪಘಾತಗಳಲ್ಲಿ 50ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದು ಮಂಡ್ಯ ಹಾಗೂ ವಿವಿಧ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ.

ಆಗಾಗ ಸಂಭವಿಸುತ್ತಿರುವ ಅಪಘಾತಗಳಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಡ್ಯ ಜಿಲ್ಲೆಯೊಳಗೆ ಹಾದು ಹೋಗುತ್ತದೆ. ಜಿಲ್ಲೆ ವ್ಯಾಪ್ತಿಯಲ್ಲಿ ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಈ ಹೆದ್ದಾರಿಯ ಕಾಮಗಾರಿ ಪೂರ್ಣಗೊಂಡಿದ್ದು, ವೇಗದ ಈ ಪ್ರಯಾಣವು ಪ್ರಯಾಣದ ಸಮಯವನ್ನು ಉಳಿಸುತ್ತಿದೆ.

ಇದುವರೆಗಿನ ಅಪಘಾತಗಳ ಸಂಪೂರ್ಣ ಮಾಹಿತಿ : ಮಂಡ್ಯ ವ್ಯಾಪ್ತಿಯ ಈ ಹೆದ್ದಾರಿಯಲ್ಲಿ ನಡೆದ ಅಪಘಾತ ಪ್ರಕರಣ ಹಾಗೂ ಸಾವಿನ ವರದಿಗೆ ಮಂಡ್ಯ ಜನ ಕಳವಳ ವ್ಯಕ್ತಪಡಿಸಿದ್ದಾರೆ. ಜನವರಿ ತಿಂಗಳಿಂದ ಮೇ ತಿಂಗಳಾಂತ್ಯದವರೆಗೆ 570 ಅಪಘಾತ ಪ್ರಕರಣ ಸಂಭವಿಸಿವೆ. ಅದರಲ್ಲಿ 50ಕ್ಕೂ ಹೆಚ್ಚು ಮಂದಿಗೆ ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡರೆ, 180ಕ್ಕೂ ಅಧಿಕ ಮಂದಿ ಕೈಕಾಲು ಮುರಿದಕೊಂಡಿದ್ದಾರೆ. 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ. ಸಾವುಗಳು ಕೂಡ ಸಂಭವಿಸಿವೆ.

ಹೆದ್ದಾರಿಯು ಉಪಯೋಗವಿದ್ದರೂ ಸಹ ವೇಗದ ಚಾಲನೆಯಿಂದಾಗಿ ದುರಂತಗಳು ಸಂಭವಿಸುತ್ತಿವೆ. ಎಕ್ಸ್‌ಪ್ರೆಸ್ ವೇ ಸೇರಿದಂತೆ ಇಲ್ಲಿನ ಸರ್ವಿಸ್ ರಸ್ತೆಯಲ್ಲಿ ವೇಗವಾಗಿ ವಾಹನಗಳು ಸಂಚಾರ ನಡೆಸುತ್ತವೆ. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿಯು ಅವಘಡಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ. ಇದರೊಂದಿಗೆ ಮತ್ತೊಂದೆಡೆ ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿವೆ. ಅದು ಸಹ ಅವಘಡಗಳಿಗೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ರಸ್ತೆಗಳಲ್ಲಿ ಉಬ್ಬುಗಳಿಂದ ಹಾಗೂ ಇನ್ನಿತರ ಕಾರಣಗಳಿಂದ ವೇಗವಾಗಿ ಚಲಿಸುತ್ತಿರುವ ವಾಹನಗಳು ಒಮ್ಮೇಲೆ ನಿಯಂತ್ರಿಸಲಾಗದೇ ಅಪಘಾತ ಸಂಭವಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago