ಬೆಂಗಳೂರು : ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರೇ ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ. ನಾಲ್ಕು ದಿನಕ್ಕೆ ದೊಡ್ಡ ಯೋಜನೆಗಳನ್ನು ಜಾರಿಮಾಡಬೇಕು ಎಂದು ಕೇಳುತ್ತಿದ್ದೀರಾ? ನಿಮಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ ? ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ.
ಶನಿವಾರ ರಾಜಭವನದಲ್ಲಿ ನಡೆದ ರಾಜ್ಯ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಅವರು ಗ್ಯಾರಂಟಿ ಯೋಜನೆಗಳ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರು.
ಕನಿಷ್ಠ ಪರಿಜ್ಞಾನವೂ ಇಲ್ಲವೇ? : ಒಂದು ಸರ್ಕಾರ ಈಗ ತಾನೆಯೇ ಅಧಿಕಾರಕ್ಕೆ ಬಂದಿದೆ. ಆ ಸರ್ಕಾರದ ಸಚಿವ ಸಂಪುಟ ಈಗ ಸಿದ್ಧವಾಗುತ್ತಿದೆ. ಯಾವುದೇ ಯೋಜನೆ ಜಾರಿಗೊಳಿಸಬೇಕು ಎಂದರೂ ಸಚಿವ ಸಂಪುಟ ಅನುಮೋದನೆ ಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿಗೆ ತಂದೇ ತರುತ್ತೇವೆ ಎಂದಿದ್ದಾರೆ. ಆದರೆ, ನಾಲ್ಕು ದಿನಕ್ಕೆ ಜಾರಿ ಮಾಡಬೇಕು ಎಂದು ಕೇಳುತ್ತಿರುವ ಚುನಾಯಿತ ಸದಸ್ಯರಾಗಿರುವ ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ? “ಎಂದು ಪ್ರಶ್ನಿಸಿದರು.
ಬಾಯಿ ಚಪಲ ಕಡಿಮೆ ಮಾಡಿಕೊಳ್ಳಿ : ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ ಪ್ರತಾಪ್ ಸಿಂಹ ಅವರೇ. ಸ್ಪಲ್ಪ ಸಮಯ ಬೇಕಿದೆ. ವಿರೋಧ ಪಕ್ಷವಾಗಿ ಏನೋ ಮಾತನಾಡಬೇಕು ಎಂದು ಮಾತನಾಡಬಾರದು. ಸಿದ್ದರಾಮಯ್ಯ ಅವರನ್ನು ಬೈದರೇ ಇವರು ಪ್ಯಾಪುರಲ್ ಆಗಿಬಿಡುತ್ತಾರೆ. ಹೀಗಾಗಿಯೇ, ಅದನ್ನು ಬಿಟ್ಟು ಇವರಿಗೆ ಏನು ಕೆಲಸ ಇಲ್ಲ ಎಂದು ಕಿಡಿಕಾರಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…