ಬೆಂಗಳೂರು : ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರೇ ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ. ನಾಲ್ಕು ದಿನಕ್ಕೆ ದೊಡ್ಡ ಯೋಜನೆಗಳನ್ನು ಜಾರಿಮಾಡಬೇಕು ಎಂದು ಕೇಳುತ್ತಿದ್ದೀರಾ? ನಿಮಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ ? ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ.
ಶನಿವಾರ ರಾಜಭವನದಲ್ಲಿ ನಡೆದ ರಾಜ್ಯ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಅವರು ಗ್ಯಾರಂಟಿ ಯೋಜನೆಗಳ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರು.
ಕನಿಷ್ಠ ಪರಿಜ್ಞಾನವೂ ಇಲ್ಲವೇ? : ಒಂದು ಸರ್ಕಾರ ಈಗ ತಾನೆಯೇ ಅಧಿಕಾರಕ್ಕೆ ಬಂದಿದೆ. ಆ ಸರ್ಕಾರದ ಸಚಿವ ಸಂಪುಟ ಈಗ ಸಿದ್ಧವಾಗುತ್ತಿದೆ. ಯಾವುದೇ ಯೋಜನೆ ಜಾರಿಗೊಳಿಸಬೇಕು ಎಂದರೂ ಸಚಿವ ಸಂಪುಟ ಅನುಮೋದನೆ ಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿಗೆ ತಂದೇ ತರುತ್ತೇವೆ ಎಂದಿದ್ದಾರೆ. ಆದರೆ, ನಾಲ್ಕು ದಿನಕ್ಕೆ ಜಾರಿ ಮಾಡಬೇಕು ಎಂದು ಕೇಳುತ್ತಿರುವ ಚುನಾಯಿತ ಸದಸ್ಯರಾಗಿರುವ ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ? “ಎಂದು ಪ್ರಶ್ನಿಸಿದರು.
ಬಾಯಿ ಚಪಲ ಕಡಿಮೆ ಮಾಡಿಕೊಳ್ಳಿ : ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ ಪ್ರತಾಪ್ ಸಿಂಹ ಅವರೇ. ಸ್ಪಲ್ಪ ಸಮಯ ಬೇಕಿದೆ. ವಿರೋಧ ಪಕ್ಷವಾಗಿ ಏನೋ ಮಾತನಾಡಬೇಕು ಎಂದು ಮಾತನಾಡಬಾರದು. ಸಿದ್ದರಾಮಯ್ಯ ಅವರನ್ನು ಬೈದರೇ ಇವರು ಪ್ಯಾಪುರಲ್ ಆಗಿಬಿಡುತ್ತಾರೆ. ಹೀಗಾಗಿಯೇ, ಅದನ್ನು ಬಿಟ್ಟು ಇವರಿಗೆ ಏನು ಕೆಲಸ ಇಲ್ಲ ಎಂದು ಕಿಡಿಕಾರಿದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…