BREAKING NEWS

ವಿರೋಧ ಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿ ಬಿಜೆಪಿಯಲ್ಲಿಲ್ಲವೇ : ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು : ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ ತೆರೆದರೆ ಹೊಲಸು ಮಾತುಗಳು, ಆರ್.ಅಶೋಕ್‍ಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಡಾ.ಸಿ.ಎನ್.ಅಶ್ವಥ್‍ನಾರಾಯಣರಿಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ. ಪ್ರತಾಪ್ ಸಿಂಹನನ್ನೇ ಎದುರಿಸಲಾಗದ ಬಸವರಾಜ ಬೊಮ್ಮಾಯಿ ಇನ್ನೂ ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಹಾಗೂ ಬಿ.ಎಸ್.ಯಡಿಯೂರಪ್ಪ ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ. ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಭಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ ಎಂದು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಬಿಜೆಪಿ ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ ಎಂದು ಕಾಂಗ್ರೆಸ್ ಅಣಕವಾಡಿದೆ.

ಬಿಜೆಪಿಯ ಒಂದು ಬಣ ಹೊಂದಾಣಿಕೆ ರಾಜಕೀಯದಿಂದ ನಮಗೆ ಸೋಲಾಯಿತು ಎನ್ನುತ್ತಿದೆ. ಮತ್ತೊಂದು ಬಣ ಕಾಂಗ್ರೆಸ್ ಗ್ಯಾರಂಟಿಗಳಿಂದ ನಮಗೆ ಸೋಲಾಯ್ತು ಎನ್ನುತ್ತಿದೆ. ಎರಡೂ ಬಣದವರು ಸತ್ಯ ಹೇಳಲು, ಒಪ್ಪಿಕೊಳ್ಳಲು ತಯಾರಿಲ್ಲ. ಶೇ.40ರಷ್ಟು ಕಮಿಷನ್ ಭ್ರಷ್ಟಾಚಾರದಿಂದ, ದುರಾಡಳಿತದಿಂದ, ಜನಪರ ಚಿಂತನೆಗಳು ಇಲ್ಲದಿರುವುದರಿಂದ, ಹಗರಣಗಳಿಂದ ಸೋಲಾಗಿದ್ದನ್ನು ಒಪ್ಪಿಕೊಳ್ಳದಿದ್ದರೆ ಬಿಜೆಪಿಯದ್ದು ಆತ್ಮಾವಲೋಕನ ಆಗುವುದಿಲ್ಲ, ಆತ್ಮ ವಂಚಕತನೆ ಆಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago